Kelirondu Katheya ಕೇಳಿರೊಂದು ಕಥೆಯ Kelirondu Katheya Team
-
- Kids & Family
-
೩ ರಿಂದ ೧೦ ವರ್ಶದ ಮಕ್ಕಳಿಗಾಗಿಯೇ ರೂಪಿಸಿದ ಮೊದಲ ಕನ್ನಡ ಕಾರ್ಯಕ್ರಮ . ಪ್ರಪಂಚದ ಹಲವಾರು ದೇಶಗಳಿಂದ ಆಯ್ದ ಜನಪದ ಕತೆಗಳು ಪುಟ್ಟ ಮಕ್ಕಳಿಗಾಗಿಯೇ ನಮ್ಮ ತಂಡದ ಮಧುರ ಧ್ವನಿ ಮತ್ತು ಇಂಪಾದ ಹಿನ್ನಲೆ ಸಂಗೀತದ ಜೊತೆಗೆ ಕೇಳಿ ಮತ್ತು ಆನಂದಿಸಿ .
ನಮ್ಮೊಡನೆ ನಿಮ್ಮ ಪ್ರತಿಕ್ರಿಯೆ ಹಂಚಿಕೊಳ್ಳಲು kelirondu@gmail.com ಗೆ ಇಮೇಲ್ ಕಳಿಸಿ .
Kannada Kids Storytelling show thats produced with young kids aged 3-12 years in age. We aim to bring tales from across the world, panchatantra, Aesop's fables etc. in Kannada for Kannada kids around the world.
Find us on iTunes , Stitcher, Google play etc by searching for Kelirondu Katheya.
Connect to us for updates and other interesting activities on twitter at https://twitter.com/KKatheya and Facebook at https://www.facebook.com/kelirondukatheya/
For partnership enquiries, please email kelirondu@gmail.com
-
Ep131 - ಬಣ್ಣದ ಪ್ರಾಣಿ
ಮಕ್ಕಳೆಂದರೆ ಕುತೂಹಲ , ಕುತೂಹಲ ಅಂದರೆ ಮಕ್ಕಳು . ದುಬಾರಿಯಾದ ಆಟದ ಸಾಮಾನಿರಲಿ , ಮೂಲೆಯಲ್ಲಿ ಬಿದ್ದಿರೋ ಕಲ್ಲಿರಲಿ , ಮಕ್ಕಳಿಗೆ ಎಲ್ಲವೂ ಆಕರ್ಷಕ ಅಂತಲೇ ತೋರುತ್ತದೆ .
ಒಮ್ಮೆ , ಶಾಲೆಯಲ್ಲಿ ಆಟ ಆಡ್ತಿದ್ದ ಮಕ್ಕಳಿಗೆ ಒಂದು ವಿಚಿತ್ರ ಪ್ರಾಣಿ ಕಣ್ಣಿಗೆ ಬಿತ್ತು . ಕೊಂಬೆಯಿಂದ ಕೊಂಬೆಗೆ ಜಿಗಿಯುತ್ತಿದ್ದ ಈ ಪ್ರಾಣಿಯು ಮಕ್ಕಳಿಗೆ ಆಟದ ಸಾಮಾನಿನ ತರಹ ತೋರಿತು .
ಪ್ರಾಣಿಯನ್ನು ಮಕ್ಕಳು ಏನು ಮಾಡಿದರು ? ಬನ್ನಿ , ಈ ಕತೆಯಲ್ಲಿ ತಿಳಿಯೋಣ . -
ಹನುಮಂತನ ಚಿಟಿಕೆ
ಕಥೆಯ ಶೀರ್ಷಿಕೆ ವಿಚಿತ್ರ ಅನ್ನಿಸುತ್ತಾ ? ಹೌದು .. ರಾಮಾಯಣದ ಈ ಅಪರೂಪದ ಕತೆ ಕೇಳೋಕೆ ಬಹು ಮಜಾ . ಜತೆಗೆ , ಹನುಮಂತ ಹಾಗೂ ರಾಮನ ಗೆಳೆತನ ಎಷ್ಟು ಗಾಢವಾಗಿತ್ತು ಅನ್ನುವುದಕ್ಕೆ ಸಾಕ್ಷಿ ಕೂಡ .
-
ಕಾಗೆ ಮರಿ ಹಾಗೂ ಹಂಸದ ಕತೆ
ಕಾಡಿನಲ್ಲಿ ವಾಸ ಆಗಿದ್ದ ಕಾಗೆ ಮರಿಗೆ ನೀರಿನಲ್ಲಿ ಈಜುತ್ತಿದ್ದ ಬೆಳ್ಳಗೆ ಸುಂದರವಾಗಿದ್ದ ಹಂಸವನ್ನ ಕಂಡಾಗ ಒಂಥರಾ ಅಸೂಯೆ ಆಯ್ತು . ಹಾಗೆ , ಸ್ವಲ್ಪ ಭಯ ಕೂಡ ಆಯ್ತು .
ತಕ್ಷಣ ಅಮ್ಮನ ಬಳಿ ಹೋಗಿ , ಹೇಳಿದಾಗ , ಅಮ್ಮ ಹೇಳಿದ್ದೇನು ? ಆಗ ಕಾಗೆ ಮರಿಗೆ ಏನನ್ನಿಸಿತು ? ಸಂವಿತ್ ಫೌಂಡೇಶನ್ ಅವರ ಸಹಯೋಗದಲ್ಲಿ ಮಾಡಿದ ಈ ಪುಟ್ಟ ಕತೆ ಹೇಳುವ ನೀತಿ ಮಾತ್ರ ಬಹಳ ದೊಡ್ಡದು . -
ನೀಲಿ ಮರಿ ಆನೆ - ಗೆಳೆತನದ ಬಗ್ಗೆ ಒಂದು ಕತೆ
ಕಾಡಿನಲ್ಲಿ ಆನೆ ಮರಿ ಒಂದು ಹುಟ್ಟಿತು . ಎಲ್ಲ ರೀತಿಯಲ್ಲೂ ಬೇರೆ ಆನೆಗಳ ಥರಾನೇ ಇದ್ದ ಆನೆ ಮರಿ ನೋಡೋಕೆ ಮಾತ್ರ ನೀಲಿ ಬಣ್ಣ ಇತ್ತು !. ಆ ಬಣ್ಣದ ಜತೆ ಕಾಡಿನಲ್ಲಿ ಬೇರೆ ಮರಿಗಳ ಜತೆ ಬೇರೆಯೋಕೆ ಈ ಆನೆ ಮರಿಗೆ ಸಾಧ್ಯ ಆಯಿತೇ ?
-
ಕೆಂಪು ಕಾರು - ಸೇವಾ ಮನೋಭಾವದ ಬಗ್ಗೆ ಒಂದು ಕತೆ
ರಕ್ಷಿತ್ ಗೆ ಕಾರುಗಳು ಅಂದರೆ ತುಂಬಾ ಇಷ್ಟ. ಒಂದು ದಿವಸ ಅವನ ಅಮ್ಮ ಅವನಿಷ್ಟದ ಕೆಂಪು ಕಾರನ್ನ ಗೊತ್ತಿಲ್ಲದೇ ಬಡ ಮಕ್ಕಳಿಗೆ ದಾನ ಮಾಡಿದಾಗ ರಕ್ಷಿತ್ ಗೆ ಆದ ದುಃಖ ಅಷ್ಟಿಷ್ಟಲ್ಲ . ಆಗ ರಕ್ಷಿತ್ ಏನು ಮಾಡಿದ ? ಬನ್ನಿ ಈ ಕತೆ ಕೇಳಿ ತಿಳಿದುಕೊಳ್ಳೋಣ
-
ರೋಹಿತನ ಸಾಹಸ - ಒಂದು "ಸಾಹಸಮಯ" ಕತೆ
” ಕೇಳಿರೊಂದು ಕಥೆಯ ” ತಂಡ ಬೆಂಗಳೂರಿನ ಸಂವಿತ್ ರಿಸರ್ಚ್ ಫೌಂಡೇಶನ್ ಜತೆ ಸೇರಿ Essential Life Skills ಎಂಬ ಶೀರ್ಷಿಕೆಯಡಿ ಆಡಿಯೋ ಪುಸ್ತಕಗಳನ್ನು ಮಾಡಿದ್ದೆವು .
ಆ ಸರಣಿಯಲ್ಲಿ ಆಯ್ದ ಕತೆಗಳಲ್ಲಿ ಈ ವಾರದ ಕತೆ “ರೋಹಿತನ ಸಾಹಸ ” . ಹೊರಗೆ ಜೋರಾಗಿ ಬೀಳುತ್ತಿದ್ದ ಮಳೆಯಲ್ಲಿ ಯಾವುದೋ ಪ್ರಾಣಿ ಕೂಗುವ ಸದ್ದು ಕೇಳಿಸ್ತು . ಮನೆಯಲ್ಲಿ ಬೇಜಾರು ಮಾಡಿಕೊಂಡು ಕುಳಿತಿದ್ದ ರೋಹಿತ್ ಆಗ ಏನು ಮಾಡಿದ ?
ಕೇಳಿ ಈ ರೋಚಕ ಕಥೆ
Customer Reviews
Just Amazing
First I would to thank the entire crew for this amazing efforts put in to get this contents together. It really brings back the old memories of our childhood which we miss these days in our daily schedule. These stories are now part of MY BED TIME STORY 😝
Sunil
Thanks for bringing back the old memories.
Great efforts...
Kids are really loving this..🙏🏻🙏🏻