Kelirondu Katheya ಕೇಳಿರೊಂದು ಕಥೆಯ Kelirondu Katheya Team
-
- Barn och familj
೩ ರಿಂದ ೧೦ ವರ್ಶದ ಮಕ್ಕಳಿಗಾಗಿಯೇ ರೂಪಿಸಿದ ಮೊದಲ ಕನ್ನಡ ಕಾರ್ಯಕ್ರಮ . ಪ್ರಪಂಚದ ಹಲವಾರು ದೇಶಗಳಿಂದ ಆಯ್ದ ಜನಪದ ಕತೆಗಳು ಪುಟ್ಟ ಮಕ್ಕಳಿಗಾಗಿಯೇ ನಮ್ಮ ತಂಡದ ಮಧುರ ಧ್ವನಿ ಮತ್ತು ಇಂಪಾದ ಹಿನ್ನಲೆ ಸಂಗೀತದ ಜೊತೆಗೆ ಕೇಳಿ ಮತ್ತು ಆನಂದಿಸಿ .
ನಮ್ಮೊಡನೆ ನಿಮ್ಮ ಪ್ರತಿಕ್ರಿಯೆ ಹಂಚಿಕೊಳ್ಳಲು kelirondu@gmail.com ಗೆ ಇಮೇಲ್ ಕಳಿಸಿ .
Kannada Kids Storytelling show thats produced with young kids aged 3-12 years in age. We aim to bring tales from across the world, panchatantra, Aesop's fables etc. in Kannada for Kannada kids around the world.
Find us on iTunes , Stitcher, Google play etc by searching for Kelirondu Katheya.
Connect to us for updates and other interesting activities on twitter at https://twitter.com/KKatheya and Facebook at https://www.facebook.com/kelirondukatheya/
For partnership enquiries, please email kelirondu@gmail.com
-
Ep131 - ಬಣ್ಣದ ಪ್ರಾಣಿ
ಮಕ್ಕಳೆಂದರೆ ಕುತೂಹಲ , ಕುತೂಹಲ ಅಂದರೆ ಮಕ್ಕಳು . ದುಬಾರಿಯಾದ ಆಟದ ಸಾಮಾನಿರಲಿ , ಮೂಲೆಯಲ್ಲಿ ಬಿದ್ದಿರೋ ಕಲ್ಲಿರಲಿ , ಮಕ್ಕಳಿಗೆ ಎಲ್ಲವೂ ಆಕರ್ಷಕ ಅಂತಲೇ ತೋರುತ್ತದೆ .
ಒಮ್ಮೆ , ಶಾಲೆಯಲ್ಲಿ ಆಟ ಆಡ್ತಿದ್ದ ಮಕ್ಕಳಿಗೆ ಒಂದು ವಿಚಿತ್ರ ಪ್ರಾಣಿ ಕಣ್ಣಿಗೆ ಬಿತ್ತು . ಕೊಂಬೆಯಿಂದ ಕೊಂಬೆಗೆ ಜಿಗಿಯುತ್ತಿದ್ದ ಈ ಪ್ರಾಣಿಯು ಮಕ್ಕಳಿಗೆ ಆಟದ ಸಾಮಾನಿನ ತರಹ ತೋರಿತು .
ಪ್ರಾಣಿಯನ್ನು ಮಕ್ಕಳು ಏನು ಮಾಡಿದರು ? ಬನ್ನಿ , ಈ ಕತೆಯಲ್ಲಿ ತಿಳಿಯೋಣ . -
ಹನುಮಂತನ ಚಿಟಿಕೆ
ಕಥೆಯ ಶೀರ್ಷಿಕೆ ವಿಚಿತ್ರ ಅನ್ನಿಸುತ್ತಾ ? ಹೌದು .. ರಾಮಾಯಣದ ಈ ಅಪರೂಪದ ಕತೆ ಕೇಳೋಕೆ ಬಹು ಮಜಾ . ಜತೆಗೆ , ಹನುಮಂತ ಹಾಗೂ ರಾಮನ ಗೆಳೆತನ ಎಷ್ಟು ಗಾಢವಾಗಿತ್ತು ಅನ್ನುವುದಕ್ಕೆ ಸಾಕ್ಷಿ ಕೂಡ .
-
ಕಾಗೆ ಮರಿ ಹಾಗೂ ಹಂಸದ ಕತೆ
ಕಾಡಿನಲ್ಲಿ ವಾಸ ಆಗಿದ್ದ ಕಾಗೆ ಮರಿಗೆ ನೀರಿನಲ್ಲಿ ಈಜುತ್ತಿದ್ದ ಬೆಳ್ಳಗೆ ಸುಂದರವಾಗಿದ್ದ ಹಂಸವನ್ನ ಕಂಡಾಗ ಒಂಥರಾ ಅಸೂಯೆ ಆಯ್ತು . ಹಾಗೆ , ಸ್ವಲ್ಪ ಭಯ ಕೂಡ ಆಯ್ತು .
ತಕ್ಷಣ ಅಮ್ಮನ ಬಳಿ ಹೋಗಿ , ಹೇಳಿದಾಗ , ಅಮ್ಮ ಹೇಳಿದ್ದೇನು ? ಆಗ ಕಾಗೆ ಮರಿಗೆ ಏನನ್ನಿಸಿತು ? ಸಂವಿತ್ ಫೌಂಡೇಶನ್ ಅವರ ಸಹಯೋಗದಲ್ಲಿ ಮಾಡಿದ ಈ ಪುಟ್ಟ ಕತೆ ಹೇಳುವ ನೀತಿ ಮಾತ್ರ ಬಹಳ ದೊಡ್ಡದು . -
ನೀಲಿ ಮರಿ ಆನೆ - ಗೆಳೆತನದ ಬಗ್ಗೆ ಒಂದು ಕತೆ
ಕಾಡಿನಲ್ಲಿ ಆನೆ ಮರಿ ಒಂದು ಹುಟ್ಟಿತು . ಎಲ್ಲ ರೀತಿಯಲ್ಲೂ ಬೇರೆ ಆನೆಗಳ ಥರಾನೇ ಇದ್ದ ಆನೆ ಮರಿ ನೋಡೋಕೆ ಮಾತ್ರ ನೀಲಿ ಬಣ್ಣ ಇತ್ತು !. ಆ ಬಣ್ಣದ ಜತೆ ಕಾಡಿನಲ್ಲಿ ಬೇರೆ ಮರಿಗಳ ಜತೆ ಬೇರೆಯೋಕೆ ಈ ಆನೆ ಮರಿಗೆ ಸಾಧ್ಯ ಆಯಿತೇ ?
-
ಕೆಂಪು ಕಾರು - ಸೇವಾ ಮನೋಭಾವದ ಬಗ್ಗೆ ಒಂದು ಕತೆ
ರಕ್ಷಿತ್ ಗೆ ಕಾರುಗಳು ಅಂದರೆ ತುಂಬಾ ಇಷ್ಟ. ಒಂದು ದಿವಸ ಅವನ ಅಮ್ಮ ಅವನಿಷ್ಟದ ಕೆಂಪು ಕಾರನ್ನ ಗೊತ್ತಿಲ್ಲದೇ ಬಡ ಮಕ್ಕಳಿಗೆ ದಾನ ಮಾಡಿದಾಗ ರಕ್ಷಿತ್ ಗೆ ಆದ ದುಃಖ ಅಷ್ಟಿಷ್ಟಲ್ಲ . ಆಗ ರಕ್ಷಿತ್ ಏನು ಮಾಡಿದ ? ಬನ್ನಿ ಈ ಕತೆ ಕೇಳಿ ತಿಳಿದುಕೊಳ್ಳೋಣ
-
ರೋಹಿತನ ಸಾಹಸ - ಒಂದು "ಸಾಹಸಮಯ" ಕತೆ
” ಕೇಳಿರೊಂದು ಕಥೆಯ ” ತಂಡ ಬೆಂಗಳೂರಿನ ಸಂವಿತ್ ರಿಸರ್ಚ್ ಫೌಂಡೇಶನ್ ಜತೆ ಸೇರಿ Essential Life Skills ಎಂಬ ಶೀರ್ಷಿಕೆಯಡಿ ಆಡಿಯೋ ಪುಸ್ತಕಗಳನ್ನು ಮಾಡಿದ್ದೆವು .
ಆ ಸರಣಿಯಲ್ಲಿ ಆಯ್ದ ಕತೆಗಳಲ್ಲಿ ಈ ವಾರದ ಕತೆ “ರೋಹಿತನ ಸಾಹಸ ” . ಹೊರಗೆ ಜೋರಾಗಿ ಬೀಳುತ್ತಿದ್ದ ಮಳೆಯಲ್ಲಿ ಯಾವುದೋ ಪ್ರಾಣಿ ಕೂಗುವ ಸದ್ದು ಕೇಳಿಸ್ತು . ಮನೆಯಲ್ಲಿ ಬೇಜಾರು ಮಾಡಿಕೊಂಡು ಕುಳಿತಿದ್ದ ರೋಹಿತ್ ಆಗ ಏನು ಮಾಡಿದ ?
ಕೇಳಿ ಈ ರೋಚಕ ಕಥೆ