Secret of Kannada ಕನ್ನಡದ ಗುಟ್ಟು Kannadada Guttu

Vishweshwar Dixit
Secret of Kannada ಕನ್ನಡದ ಗುಟ್ಟು Kannadada Guttu

Explore varied topics to unlock the secrets of Kannada Language ಕನ್ನಡದ ಗುಟ್ಟನ್ನು ರಟ್ಟು ಮಾಡುವ ವಿವಿಧ ವಿಷಯಗಳ ವಿಚಾರ Read at http://kannadakali.com Watch at http://youtube.com/channel/UCCON6n4lEgj6NsPqCLZdDSw Kannada Kali : Kannadada Guttu

  1. FEB 26

    ಕಂತು 2: ಭಜ ಗೋವಿಂದಂ (ಮೋಹಮುದ್ಗರ) Bhaja Govindam - ಆದಿ ಶಂಕರ ಮತ್ತು ಶಿಷ್ಯರು

    👍 Like it? ...... ⁠⁠⁠⁠⁠⁠⁠⁠⁠⁠Subscribe and Share! ⁠⁠⁠⁠⁠⁠⁠⁠⁠⁠ 👁️ ⁠⁠⁠⁠⁠⁠⁠⁠⁠⁠Watch it⁠⁠⁠⁠⁠⁠⁠⁠⁠⁠  🕮 ⁠⁠⁠⁠⁠⁠⁠⁠⁠⁠Read it ⁠⁠⁠⁠⁠⁠⁠⁠⁠⁠  👂 ⁠⁠⁠⁠⁠⁠⁠⁠⁠⁠Listen it⁠⁠⁠⁠⁠⁠⁠⁠⁠⁠ 📧 ⁠⁠⁠⁠⁠⁠⁠⁠⁠⁠Subscribe to our newsletter⁠ "ಭಜ ಗೋವಿಂದಂ" ಎಂದೇ ಪ್ರಸಿದ್ಧವಾದ, ಆದಿ ಶಂಕರ ರಚಿತ "ಮೋಹಮುದ್ಗರ", ‌ ಮಾಯೆಯ ನೆತ್ತಿಗೆ ನೇರ ಗದಾಪ್ರಹಾರ ಮಾಡಿ ನಮ್ಮ ನಿಜ‌ ಸ್ವರೂಪದತ್ತ ದಾರಿ ತೋರಿಸುವ ಕೃತಿ. ಬಾಳಿನ ಗುರಿ ಏನು? ಗಳಿಕೆಯ ಆಸೆ ಏಕೆ? ಸತ್ಯ ಯಾವುದು, ಮಿಥ್ಯೆ ಯಾವುದು? ಪ್ರಾಪಂಚಿಕ ಹೊರ ತಿಳಿವೋ, ತನ್ನ ಒಳ ತಿಳಿವೋ? ಇವೆಲ್ಲವನ್ನೂ ನೇರವಾಗಿ ಉತ್ತರಿಸುತ್ತ ಶಂಕರರು, ಸಂಸಾರದ ಪೊಳ್ಳುತನ, ಮನುಷ್ಯನ ಡಂಬಾಚಾರ, ವ್ಯರ್ಥ ಹೋರಾಟಗಳನ್ನು ಬಯಲಿಗೆ ಎಳೆಯುತ್ತಾರೆ. ನೈಜವನ್ನು ಕಂಡುಕೊಳ್ಳಲು ಅನುಸರಿಸಬೇಕಾದ ವೇದಾಂತ ತತ್ವಗಳನ್ನು ಇಲ್ಲಿ ಬಿಗಿಯಾಗಿ ಹೆಣೆದಿದ್ದಾರೆ. ಪಲ್ಲವಿ ಎಂದು ಗಣಿಸಲಾದ ಮೊದಲ ನುಡಿ ಮತ್ತು ಮುಂದಿನ ಹನ್ನೆರಡು ನುಡಿಗಳನ್ನು ಸ್ವತಃ ಶಂಕರರು ರಚಿಸಿದ್ದಾರೆ. ಇವನ್ನು "ದ್ವಾದಶ ಮಂಜರಿಕಾ ಸ್ತೋತ್ರ" (ಹನ್ನೆರಡು ಹೂಗಳ ಗೊಂಚಲು) ಎಂದು ಗುರುತಿಸಲಾಗಿದೆ. ಇವುಗಳಿಂದ ಸ್ಫೂರ್ತಿಗೊಂಡ ಅವರ ಹದಿನಾಲ್ಕು ಶಿಷ್ಯರು ಒಂದೊಂದು ನುಡಿಗಳನ್ನು ಸೇರಿಸಿದರು; ಅದೇ ಚತುರ್ದಶ ಮಂಜರಿಕಾ ಸ್ತೋತ್ರ. ಮತ್ತೆ ನಾಲ್ಕು ನುಡಿಗಳನ್ನು ಶಂಕರರು ರಚಿಸಿ ಒಟ್ಟು ೩೧ ನುಡಿಗಳ ಮೋಹ ಮುದ್ಗರವನ್ನು ಪೂರ್ತಿಗೊಳಿಸಿದರು. ಇದರ ಸರಳ ಕನ್ನಡ ಅನುವಾದ ಇಲ್ಲಿದೆ ಪದ್ಯರೂಪದಲ್ಲಿ.ಕಂತು ೧: ನುಡಿ ೧ – ೧೩, ಪಲ್ಲವಿಯೊಡನೆ ಹನ್ನೆರಡು ಹೂಗಳ ಗೊಂಚಲುಕಂತು ೨: ನುಡಿ ೧೪ – ೨೭ಚತುರ್ದಶ ಮಂಜರಿಕಾಕಂತು ೩: ನುಡಿ ೨೮ – ೩೧ಉಪಸಂಹಾರಕನ್ನಡಕ್ಕೆನೆನೆ ಗೋವಿಂದನವಿಶ್ವೇಶ್ವರ ದೀಕ್ಷಿತ ---- ಕೆಲವರು ಕೆಲವು ಪದಗಳ ಅನುವಾದದ ಬಗ್ಗೆ ಕೇಳಿದ್ದೀರಿ. ನನ್ನ ವಿಚಾರ ಹೀಗಿದೆ: ಡುಕೃಂಕರಣೇ:ಸಾಮಾನ್ಯವಾಗಿ ಇದನ್ನು (ಇಡಿಯ) ವ್ಯಾಕರಣ ಎಂದು ತಿಳಿಯಲಾಗಿದೆ. ಭಾಷೆ, ಆಲೋಚನೆಗಳು ಮತ್ತು ಜ್ಞಾನವನ್ನು ಹಿಡಿದಿಡುವ ಮತ್ತು ಸಂವಹಿಸುವ ಸಾಧನವಾದರೆ, ವ್ಯಾಕರಣವು ಹಾಗೆ ಮಾಡಲು ಒಂದು ಚೌಕಟ್ಟು ಮತ್ತು ನಿಯಮಗಳನ್ನು ಒದಗಿಸುತ್ತದೆ. ಆದಾಗ್ಯೂ ನಿಯಮಗಳೇ ನಿಜವಾದ ಜ್ಞಾನವಲ್ಲ. ಜ್ಞಾನ ಸಂವಹನೆಗೆ ಅಗತ್ಯವಿದ್ದರೂ ವ್ಯಾಕರಣವೇ (syntax)ಗುರಿಯಲ್ಲ. ವ್ಯಾಕರಣ (syntax)ಮೇಲ್ಮೈ ಜ್ಞಾನವಾದರೆ, ಅರ್ಥ (symantics)ಆಂತರಿಕ ನೈಜ ಜ್ಞಾನವಾಗಿದೆ. ರೂಪ(form)ವನ್ನೆ ಸ್ವರೂಪ(substance)ಎಂದು ತಿಳಿಯುವುದು ಮೌಢ್ಯ. ಶಂಕರರು, "ಭಜ ಗೋವಿಂದಂ" ರಚನೆಯ ಉದ್ದಕ್ಕೂ, ಆಚರಣೆಗಳು, ಭೌತಿಕತೆ, ನಡವಳಿಕೆಗಳು, ಮತ್ತು ಜೀವನ ನಿಯಮಗಳು ಎಲ್ಲವನ್ನೂ ಮೀರಿ, ಅವುಗಳ ಟೊಳ್ಳುತನವನ್ನು ಕಂಡು, ನಮ್ಮ ನೈಜ ಸ್ವರೂಪವನ್ನು ಅರಿತುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳುತ್ತಾರೆ. ಆ ಭಾವದಲ್ಲಿ, "ಒಳ ತಿಳಿವು" ಆಂತರಿಕ ಮತ್ತು ನಿಜವಾದ ಜ್ಞಾನವಾದರೆ "ಡುಕೃಂಕರಣೆ"ಯನ್ನು "ಹೊರ ತಿಳಿವು" ಎಂದು ಅನುವಾದಿಸಿದ್ದೇನೆ. ಈ ಕೆಲವು ಕೊಂಡಿಗಳು ತಿಳಿದುಕೊಳ್ಳಲು ಸಹಕಾರಿಯಾಗಬಹುದು: ⁠https://nivedita2015.wordpress.com/2015/09/25/grammatical-aspects-in-bhaja-govindam-verse-1/⁠⁠https://www.reddit.com/r/sanskrit/comments/5z3e1m/translating_dukrjkarane_any_hints/⁠ಮೂಢಮತೇ: ಇದಕ್ಕೆ ಕೆಲವರು "ಮಂದಮತಿ" ಅಥವ ಕೇವಲ "ಮನವೇ" ಎನ್ನಬಹುದಲ್ಲ ಎಂದಿದ್ದಾರೆ. ಮೊದಲನೆಯದಾಗಿ, ಇಲ್ಲಿ ಮೂಢ ಎನ್ನುವುದಕ್ಕೆ ಅಜ್ಞ/ತಿಳಿಗೇಡಿ ಎನ್ನುವ ಸಾಮಾನ್ಯ ಅರ್ಥ ಇದೆ. ಭ್ರಮೆಗೊಳಗಾದವ, ಮರುಳ, ಮಂಕು ಹಿಡಿದವ ಎನ್ನುವದು ಇಲ್ಲಿ ಔಚಿತ್ಯಪೂರ್ಣವಾಗಿದೆ. ಅಂದರೆ ಮಾಯೆಯ ಜಾಲದಲ್ಲಿ ಸಿಕ್ಕು, ತನ್ನ ನಿಜ ಸ್ವರೂಪವನ್ನು ಅರಿಯದೆ, ಬೇರೆಯದಕ್ಕೆ ತಾ ಎಂದು ಅಂಟಿಕೊಂಡಿರುವವ ಎನ್ನುವುದು ಶಂಕರರ ತಾತ್ವಿಕ ವಿಚಾರಕ್ಕೆ ಹೊಂದಿಕೆಯಾಗುತ್ತದೆ. "ಮತಿ" ಎಂದರೆ ವಿವೇಚನೆಯ ಶಕ್ತಿ ಉಳ್ಳದ್ದು; ಮನಸ್ಸು ಎನ್ನುವುದಕ್ಕಿಂತ ವಿಶಿಷ್ಟವಾದದ್ದು. ವಿವೇಕ ಚೂಡಾಮಣಿಯ ಕರ್ತೃ ಆದ ಶಂಕರರು ಇದನ್ನು ಉದ್ದೇಶಪೂರ್ವಕ ಉಪಯೋಗಿಸಿದ್ದಾರೆ. ಆದ್ದರಿಂದ ಇದನ್ನು "ಮನ" ಎಂದು ಬದಲಾಯಿಸುವುದು ತಕ್ಕುದಲ್ಲ ಎನಿಸುತ್ತದೆ. ಮೇಲಾಗಿ, ಮೂಲದಲ್ಲಿ ಇರುವ ಮೂಢ ಪದವನ್ನು ಬಿಟ್ಟುಬಿಡುವುದೂ ಸರಿ ಅಲ್ಲ; ಅನುವಾದ ಅಂದರೆ (ಪದಶಃ ಅಲ್ಲದಿದ್ದರೂ) ಮೂಲಕ್ಕೆ ಆದಷ್ಟು ಬದ್ಧವಾಗಿರಬೇಕು.ಎರಡನೆಯದಾಗಿ, ಮಂದ ಎನ್ನುವುದು ಮೂಢ ಪದಕ್ಕೆ ಅನ್ವರ್ಥ ಪದ ಆದರೂ ಬೇರೆ ಅರ್ಥವೂ (slow, dull, dim...) ಬರಬಹುದು, ಅಲ್ಲದೆ, ಒಂದು ಸಂಸ್ಕೃತ ಪದಕ್ಕೆ ಬದಲಾಗಿ (ಕಾರಣ ಇಲ್ಲದೆ) ಇನ್ನೊಂದು ಸಂಸ್ಕೃತ ಪದ ಹಾಕಿದರೆ ಅದಕ್ಕೆ ಕನ್ನಡ ಅನುವಾದ ಏಕೆ ಅನ್ನಬೇಕು? -- ಚತುರ್ದಶ ಮಂಜರಿಕಾ 00:04 ೧ ಭಜ ಗೋವಿಂದಂ ಭಜ ಗೋವಿಂದಂ 00:53 ೨ ಮೂಢ ಜಹೀಹಿ ಧನಾಗಮತೃಷ್ಣಾಂ 01:45 ೩ ನಾರೀಸ್ತನಭರನಾಭೀದೇಶಂ 02:26 ೪ ನಲಿನೀದಲಗತಜಲಮತಿತರಲಂ 03:10 ೫ ಯಾವದ್ವಿತ್ತೋಪಾರ್ಜನಸಕ್ತಃ 03:55 ೬ ಯಾವತ್‌ ಪವನೋ ನಿವಸತಿ ದೇಹೇ 04:40 ೭ ಬಾಲಸ್ತಾವತ್‌ ಕ್ರೀಡಾಸಕ್ತಃ05:25 ೮ ಕಾ ತೇ ಕಾಂತಾ? ಕಸ್ತೇ ಪುತ್ರಃ? 06:10 ೯ ಸತ್ಸಂಗತ್ವೇ ನಿಸ್ಸಂಗತ್ವಂ 06:49 ೧೦ ವಯಸಿ ಗತೇ ಕಃ ಕಾಮವಿಕಾರಃ? 07:29 ೧೧ ಮಾ ಕುರು ಧನ ಜನ ಯೌವನ ಗರ್ವಂ 08:09 ೧೨ ದಿನಯಾಮಿನ್ಯೌ, ಸಾಯಂ ಪ್ರಾತಃ 08:54 ೧೩ ಕಾ ತೇ ಕಾಂತಾ ಧನಗತಚಿಂತಾ? 09:40 ಕೃತಜ್ಞತೆ, ಸಂಪರ್ಕ

    12 min
  2. FEB 26

    ಕಂತು ೩: ಭಜ ಗೋವಿಂದಂ (ಮೋಹಮುದ್ಗರ) Bhaja Govindam - ಆದಿ ಶಂಕರ ಮತ್ತು ಶಿಷ್ಯರು

    👍 Like it? ...... ⁠⁠⁠⁠⁠⁠⁠⁠⁠⁠Subscribe and Share! ⁠⁠⁠⁠⁠⁠⁠⁠⁠⁠ 👁️ ⁠⁠⁠⁠⁠⁠⁠⁠⁠⁠Watch it⁠⁠⁠⁠⁠⁠⁠⁠⁠⁠  🕮 ⁠⁠⁠⁠⁠⁠⁠⁠⁠⁠Read it ⁠⁠⁠⁠⁠⁠⁠⁠⁠⁠  👂 ⁠⁠⁠⁠⁠⁠⁠⁠⁠⁠Listen it⁠⁠⁠⁠⁠⁠⁠⁠⁠⁠ 📧 ⁠⁠⁠⁠⁠⁠⁠⁠⁠⁠Subscribe to our newsletter⁠ "ಭಜ ಗೋವಿಂದಂ" ಎಂದೇ ಪ್ರಸಿದ್ಧವಾದ, ಆದಿ ಶಂಕರ ರಚಿತ "ಮೋಹಮುದ್ಗರ", ‌ ಮಾಯೆಯ ನೆತ್ತಿಗೆ ನೇರ ಗದಾಪ್ರಹಾರ ಮಾಡಿ ನಮ್ಮ ನಿಜ‌ ಸ್ವರೂಪದತ್ತ ದಾರಿ ತೋರಿಸುವ ಕೃತಿ. ಬಾಳಿನ ಗುರಿ ಏನು? ಗಳಿಕೆಯ ಆಸೆ ಏಕೆ? ಸತ್ಯ ಯಾವುದು, ಮಿಥ್ಯೆ ಯಾವುದು? ಪ್ರಾಪಂಚಿಕ ಹೊರ ತಿಳಿವೋ, ತನ್ನ ಒಳ ತಿಳಿವೋ? ಇವೆಲ್ಲವನ್ನೂ ನೇರವಾಗಿ ಉತ್ತರಿಸುತ್ತ ಶಂಕರರು, ಸಂಸಾರದ ಪೊಳ್ಳುತನ, ಮನುಷ್ಯನ ಡಂಬಾಚಾರ, ವ್ಯರ್ಥ ಹೋರಾಟಗಳನ್ನು ಬಯಲಿಗೆ ಎಳೆಯುತ್ತಾರೆ. ನೈಜವನ್ನು ಕಂಡುಕೊಳ್ಳಲು ಅನುಸರಿಸಬೇಕಾದ ವೇದಾಂತ ತತ್ವಗಳನ್ನು ಇಲ್ಲಿ ಬಿಗಿಯಾಗಿ ಹೆಣೆದಿದ್ದಾರೆ. ಪಲ್ಲವಿ ಎಂದು ಗಣಿಸಲಾದ ಮೊದಲ ನುಡಿ ಮತ್ತು ಮುಂದಿನ ಹನ್ನೆರಡು ನುಡಿಗಳನ್ನು ಸ್ವತಃ ಶಂಕರರು ರಚಿಸಿದ್ದಾರೆ. ಇವನ್ನು "ದ್ವಾದಶ ಮಂಜರಿಕಾ ಸ್ತೋತ್ರ" (ಹನ್ನೆರಡು ಹೂಗಳ ಗೊಂಚಲು) ಎಂದು ಗುರುತಿಸಲಾಗಿದೆ. ಇವುಗಳಿಂದ ಸ್ಫೂರ್ತಿಗೊಂಡ ಅವರ ಹದಿನಾಲ್ಕು ಶಿಷ್ಯರು ಒಂದೊಂದು ನುಡಿಗಳನ್ನು ಸೇರಿಸಿದರು; ಅದೇ ಚತುರ್ದಶ ಮಂಜರಿಕಾ ಸ್ತೋತ್ರ. ಮತ್ತೆ ನಾಲ್ಕು ನುಡಿಗಳನ್ನು ಶಂಕರರು ರಚಿಸಿ ಒಟ್ಟು ೩೧ ನುಡಿಗಳ ಮೋಹ ಮುದ್ಗರವನ್ನು ಪೂರ್ತಿಗೊಳಿಸಿದರು. ಇದರ ಸರಳ ಕನ್ನಡ ಅನುವಾದ ಇಲ್ಲಿದೆ ಪದ್ಯರೂಪದಲ್ಲಿ. ಕಂತು ೧: ನುಡಿ ೧ – ೧೩, ಪಲ್ಲವಿಯೊಡನೆ ಹನ್ನೆರಡು ಹೂಗಳ ಗೊಂಚಲು ಕಂತು ೨: ನುಡಿ ೧೪ – ೨೭ಚತುರ್ದಶ ಮಂಜರಿಕಾಕಂತು ೩: ನುಡಿ ೨೮ – ೩೧ ಕಂತು ೩ ಉಪಸಂಹಾರ ಕನ್ನಡಕ್ಕೆ: ನೆನೆ ಗೋವಿಂದನ, ವಿಶ್ವೇಶ್ವರ ದೀಕ್ಷಿತ ---- ಕೆಲವರು ಕೆಲವು ಪದಗಳ ಅನುವಾದದ ಬಗ್ಗೆ ಕೇಳಿದ್ದೀರಿ. ನನ್ನ ವಿಚಾರ ಹೀಗಿದೆ: ಡುಕೃಂಕರಣೇ:ಸಾಮಾನ್ಯವಾಗಿ ಇದನ್ನು (ಇಡಿಯ) ವ್ಯಾಕರಣ ಎಂದು ತಿಳಿಯಲಾಗಿದೆ. ಭಾಷೆ, ಆಲೋಚನೆಗಳು ಮತ್ತು ಜ್ಞಾನವನ್ನು ಹಿಡಿದಿಡುವ ಮತ್ತು ಸಂವಹಿಸುವ ಸಾಧನವಾದರೆ, ವ್ಯಾಕರಣವು ಹಾಗೆ ಮಾಡಲು ಒಂದು ಚೌಕಟ್ಟು ಮತ್ತು ನಿಯಮಗಳನ್ನು ಒದಗಿಸುತ್ತದೆ. ಆದಾಗ್ಯೂ ನಿಯಮಗಳೇ ನಿಜವಾದ ಜ್ಞಾನವಲ್ಲ. ಜ್ಞಾನ ಸಂವಹನೆಗೆ ಅಗತ್ಯವಿದ್ದರೂ ವ್ಯಾಕರಣವೇ (syntax)ಗುರಿಯಲ್ಲ. ವ್ಯಾಕರಣ (syntax)ಮೇಲ್ಮೈ ಜ್ಞಾನವಾದರೆ, ಅರ್ಥ (symantics)ಆಂತರಿಕ ನೈಜ ಜ್ಞಾನವಾಗಿದೆ. ರೂಪ(form)ವನ್ನೆ ಸ್ವರೂಪ(substance)ಎಂದು ತಿಳಿಯುವುದು ಮೌಢ್ಯ. ಶಂಕರರು, "ಭಜ ಗೋವಿಂದಂ" ರಚನೆಯ ಉದ್ದಕ್ಕೂ, ಆಚರಣೆಗಳು, ಭೌತಿಕತೆ, ನಡವಳಿಕೆಗಳು, ಮತ್ತು ಜೀವನ ನಿಯಮಗಳು ಎಲ್ಲವನ್ನೂ ಮೀರಿ, ಅವುಗಳ ಟೊಳ್ಳುತನವನ್ನು ಕಂಡು, ನಮ್ಮ ನೈಜ ಸ್ವರೂಪವನ್ನು ಅರಿತುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳುತ್ತಾರೆ. ಆ ಭಾವದಲ್ಲಿ, "ಒಳ ತಿಳಿವು" ಆಂತರಿಕ ಮತ್ತು ನಿಜವಾದ ಜ್ಞಾನವಾದರೆ "ಡುಕೃಂಕರಣೆ"ಯನ್ನು "ಹೊರ ತಿಳಿವು" ಎಂದು ಅನುವಾದಿಸಿದ್ದೇನೆ. ಈ ಕೆಲವು ಕೊಂಡಿಗಳು ತಿಳಿದುಕೊಳ್ಳಲು ಸಹಕಾರಿಯಾಗಬಹುದು: ⁠https://nivedita2015.wordpress.com/2015/09/25/grammatical-aspects-in-bhaja-govindam-verse-1/⁠⁠https://www.reddit.com/r/sanskrit/comments/5z3e1m/translating_dukrjkarane_any_hints/⁠ಮೂಢಮತೇ: ಇದಕ್ಕೆ ಕೆಲವರು "ಮಂದಮತಿ" ಅಥವ ಕೇವಲ "ಮನವೇ" ಎನ್ನಬಹುದಲ್ಲ ಎಂದಿದ್ದಾರೆ. ಮೊದಲನೆಯದಾಗಿ, ಇಲ್ಲಿ ಮೂಢ ಎನ್ನುವುದಕ್ಕೆ ಅಜ್ಞ/ತಿಳಿಗೇಡಿ ಎನ್ನುವ ಸಾಮಾನ್ಯ ಅರ್ಥ ಇದೆ. ಭ್ರಮೆಗೊಳಗಾದವ, ಮರುಳ, ಮಂಕು ಹಿಡಿದವ ಎನ್ನುವದು ಇಲ್ಲಿ ಔಚಿತ್ಯಪೂರ್ಣವಾಗಿದೆ. ಅಂದರೆ ಮಾಯೆಯ ಜಾಲದಲ್ಲಿ ಸಿಕ್ಕು, ತನ್ನ ನಿಜ ಸ್ವರೂಪವನ್ನು ಅರಿಯದೆ, ಬೇರೆಯದಕ್ಕೆ ತಾ ಎಂದು ಅಂಟಿಕೊಂಡಿರುವವ ಎನ್ನುವುದು ಶಂಕರರ ತಾತ್ವಿಕ ವಿಚಾರಕ್ಕೆ ಹೊಂದಿಕೆಯಾಗುತ್ತದೆ. "ಮತಿ" ಎಂದರೆ ವಿವೇಚನೆಯ ಶಕ್ತಿ ಉಳ್ಳದ್ದು; ಮನಸ್ಸು ಎನ್ನುವುದಕ್ಕಿಂತ ವಿಶಿಷ್ಟವಾದದ್ದು. ವಿವೇಕ ಚೂಡಾಮಣಿಯ ಕರ್ತೃ ಆದ ಶಂಕರರು ಇದನ್ನು ಉದ್ದೇಶಪೂರ್ವಕ ಉಪಯೋಗಿಸಿದ್ದಾರೆ. ಆದ್ದರಿಂದ ಇದನ್ನು "ಮನ" ಎಂದು ಬದಲಾಯಿಸುವುದು ತಕ್ಕುದಲ್ಲ ಎನಿಸುತ್ತದೆ. ಮೇಲಾಗಿ, ಮೂಲದಲ್ಲಿ ಇರುವ ಮೂಢ ಪದವನ್ನು ಬಿಟ್ಟುಬಿಡುವುದೂ ಸರಿ ಅಲ್ಲ; ಅನುವಾದ ಅಂದರೆ (ಪದಶಃ ಅಲ್ಲದಿದ್ದರೂ) ಮೂಲಕ್ಕೆ ಆದಷ್ಟು ಬದ್ಧವಾಗಿರಬೇಕು.ಎರಡನೆಯದಾಗಿ, ಮಂದ ಎನ್ನುವುದು ಮೂಢ ಪದಕ್ಕೆ ಅನ್ವರ್ಥ ಪದ ಆದರೂ ಬೇರೆ ಅರ್ಥವೂ (slow, dull, dim...) ಬರಬಹುದು, ಅಲ್ಲದೆ, ಒಂದು ಸಂಸ್ಕೃತ ಪದಕ್ಕೆ ಬದಲಾಗಿ (ಕಾರಣ ಇಲ್ಲದೆ) ಇನ್ನೊಂದು ಸಂಸ್ಕೃತ ಪದ ಹಾಕಿದರೆ ಅದಕ್ಕೆ ಕನ್ನಡ ಅನುವಾದ ಏಕೆ ಅನ್ನಬೇಕು? -- ಉಪಸಂಹಾರ 00:04 ೧ ಭಜ ಗೋವಿಂದಂ ಭಜ ಗೋವಿಂದಂ 00:53 ೨ ಮೂಢ ಜಹೀಹಿ ಧನಾಗಮತೃಷ್ಣಾಂ 01:45 ೩ ನಾರೀಸ್ತನಭರನಾಭೀದೇಶಂ 02:26 ೪ ನಲಿನೀದಲಗತಜಲಮತಿತರಲಂ 03:10 ೫ ಯಾವದ್ವಿತ್ತೋಪಾರ್ಜನಸಕ್ತಃ 03:55 ೬ ಯಾವತ್‌ ಪವನೋ ನಿವಸತಿ ದೇಹೇ 04:40 ೭ ಬಾಲಸ್ತಾವತ್‌ ಕ್ರೀಡಾಸಕ್ತಃ05:25 ೮ ಕಾ ತೇ ಕಾಂತಾ? ಕಸ್ತೇ ಪುತ್ರಃ? 06:10 ೯ ಸತ್ಸಂಗತ್ವೇ ನಿಸ್ಸಂಗತ್ವಂ 06:49 ೧೦ ವಯಸಿ ಗತೇ ಕಃ ಕಾಮವಿಕಾರಃ? 07:29 ೧೧ ಮಾ ಕುರು ಧನ ಜನ ಯೌವನ ಗರ್ವಂ 08:09 ೧೨ ದಿನಯಾಮಿನ್ಯೌ, ಸಾಯಂ ಪ್ರಾತಃ 08:54 ೧೩ ಕಾ ತೇ ಕಾಂತಾ ಧನಗತಚಿಂತಾ? 09:40 ಕೃತಜ್ಞತೆ, ಸಂಪರ್ಕ

    5 min
  3. FEB 10

    ಕಂತು ೧: ಭಜ ಗೋವಿಂದಂ (ಮೋಹಮುದ್ಗರ) Bhaja Govindam - ಆದಿ ಶಂಕರ ಮತ್ತು ಶಿಷ್ಯರು

    👍 Like it? ...... ⁠⁠⁠⁠⁠⁠⁠⁠⁠Subscribe and Share! ⁠⁠⁠⁠⁠⁠⁠⁠⁠ 👁️ ⁠⁠⁠⁠⁠⁠⁠⁠⁠Watch it⁠⁠⁠⁠⁠⁠⁠⁠⁠  🕮 ⁠⁠⁠⁠⁠⁠⁠⁠⁠Read it ⁠⁠⁠⁠⁠⁠⁠⁠⁠  👂 ⁠⁠⁠⁠⁠⁠⁠⁠⁠Listen it⁠⁠⁠⁠⁠⁠⁠⁠⁠ 📧 ⁠⁠⁠⁠⁠⁠⁠⁠⁠Subscribe to our newsletter "ಭಜ ಗೋವಿಂದಂ" ಎಂದೇ ಪ್ರಸಿದ್ಧವಾದ, ಆದಿ ಶಂಕರ ರಚಿತ "ಮೋಹಮುದ್ಗರ", ‌ ಮಾಯೆಯ ನೆತ್ತಿಗೆ ನೇರ ಗದಾಪ್ರಹಾರ ಮಾಡಿ ನಮ್ಮ ನಿಜ‌ ಸ್ವರೂಪದತ್ತ ದಾರಿ ತೋರಿಸುವ ಕೃತಿ. ಬಾಳಿನ ಗುರಿ ಏನು? ಗಳಿಕೆಯ ಆಸೆ ಏಕೆ? ಸತ್ಯ ಯಾವುದು, ಮಿಥ್ಯೆ ಯಾವುದು? ಪ್ರಾಪಂಚಿಕ ಹೊರ ತಿಳಿವೋ, ತನ್ನ ಒಳ ತಿಳಿವೋ? ಇವೆಲ್ಲವನ್ನೂ ನೇರವಾಗಿ ಉತ್ತರಿಸುತ್ತ ಶಂಕರರು, ಸಂಸಾರದ ಪೊಳ್ಳುತನ, ಮನುಷ್ಯನ ಡಂಬಾಚಾರ, ವ್ಯರ್ಥ ಹೋರಾಟಗಳನ್ನು ಬಯಲಿಗೆ ಎಳೆಯುತ್ತಾರೆ. ನೈಜವನ್ನು ಕಂಡುಕೊಳ್ಳಲು ಅನುಸರಿಸಬೇಕಾದ ವೇದಾಂತ ತತ್ವಗಳನ್ನು ಇಲ್ಲಿ ಬಿಗಿಯಾಗಿ ಹೆಣೆದಿದ್ದಾರೆ. ಪಲ್ಲವಿ ಎಂದು ಗಣಿಸಲಾದ ಮೊದಲ ನುಡಿ ಮತ್ತು ಮುಂದಿನ ಹನ್ನೆರಡು ನುಡಿಗಳನ್ನು ಸ್ವತಃ ಶಂಕರರು ರಚಿಸಿದ್ದಾರೆ. ಇವನ್ನು "ದ್ವಾದಶ ಮಂಜರಿಕಾ ಸ್ತೋತ್ರ" (ಹನ್ನೆರಡು ಹೂಗಳ ಗೊಂಚಲು) ಎಂದು ಗುರುತಿಸಲಾಗಿದೆ. ಇವುಗಳಿಂದ ಸ್ಫೂರ್ತಿಗೊಂಡ ಅವರ ಹದಿನಾಲ್ಕು ಶಿಷ್ಯರು ಒಂದೊಂದು ನುಡಿಗಳನ್ನು ಸೇರಿಸಿದರು; ಅದೇ ಚತುರ್ದಶ ಮಂಜರಿಕಾ ಸ್ತೋತ್ರ. ಮತ್ತೆ ನಾಲ್ಕು ನುಡಿಗಳನ್ನು ಶಂಕರರು ರಚಿಸಿ ಒಟ್ಟು ೩೧ ನುಡಿಗಳ ಮೋಹ ಮುದ್ಗರವನ್ನು ಪೂರ್ತಿಗೊಳಿಸಿದರು.ಇದರ ಸರಳ ಕನ್ನಡ ಅನುವಾದ ಇಲ್ಲಿದೆ ಪದ್ಯರೂಪದಲ್ಲಿ.ಕಂತು ೧: ನುಡಿ ೧ – ೧೩, ಪಲ್ಲವಿಯೊಡನೆ ಹನ್ನೆರಡು ಹೂಗಳ ಗೊಂಚಲುಕಂತು ೨: ನುಡಿ ೧೪ – ೨೭ಚತುರ್ದಶ ಮಂಜರಿಕಾಕಂತು ೩: ನುಡಿ ೨೮ – ೩೧ಉಪಸಂಹಾರಕನ್ನಡಕ್ಕೆನೆನೆ ಗೋವಿಂದನವಿಶ್ವೇಶ್ವರ ದೀಕ್ಷಿತ ---- ಕೆಲವರು ಕೆಲವು ಪದಗಳ ಅನುವಾದದ ಬಗ್ಗೆ ಕೇಳಿದ್ದೀರಿ. ನನ್ನ ವಿಚಾರ ಹೀಗಿದೆ: ಡುಕೃಂಕರಣೇ:ಸಾಮಾನ್ಯವಾಗಿ ಇದನ್ನು (ಇಡಿಯ) ವ್ಯಾಕರಣ ಎಂದು ತಿಳಿಯಲಾಗಿದೆ. ಭಾಷೆ, ಆಲೋಚನೆಗಳು ಮತ್ತು ಜ್ಞಾನವನ್ನು ಹಿಡಿದಿಡುವ ಮತ್ತು ಸಂವಹಿಸುವ ಸಾಧನವಾದರೆ, ವ್ಯಾಕರಣವು ಹಾಗೆ ಮಾಡಲು ಒಂದು ಚೌಕಟ್ಟು ಮತ್ತು ನಿಯಮಗಳನ್ನು ಒದಗಿಸುತ್ತದೆ. ಆದಾಗ್ಯೂ ನಿಯಮಗಳೇ ನಿಜವಾದ ಜ್ಞಾನವಲ್ಲ. ಜ್ಞಾನ ಸಂವಹನೆಗೆ ಅಗತ್ಯವಿದ್ದರೂ ವ್ಯಾಕರಣವೇ (syntax)ಗುರಿಯಲ್ಲ. ವ್ಯಾಕರಣ (syntax)ಮೇಲ್ಮೈ ಜ್ಞಾನವಾದರೆ, ಅರ್ಥ (symantics)ಆಂತರಿಕ ನೈಜ ಜ್ಞಾನವಾಗಿದೆ. ರೂಪ(form)ವನ್ನೆ ಸ್ವರೂಪ(substance)ಎಂದು ತಿಳಿಯುವುದು ಮೌಢ್ಯ. ಶಂಕರರು, "ಭಜ ಗೋವಿಂದಂ" ರಚನೆಯ ಉದ್ದಕ್ಕೂ, ಆಚರಣೆಗಳು, ಭೌತಿಕತೆ, ನಡವಳಿಕೆಗಳು, ಮತ್ತು ಜೀವನ ನಿಯಮಗಳು ಎಲ್ಲವನ್ನೂ ಮೀರಿ, ಅವುಗಳ ಟೊಳ್ಳುತನವನ್ನು ಕಂಡು, ನಮ್ಮ ನೈಜ ಸ್ವರೂಪವನ್ನು ಅರಿತುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳುತ್ತಾರೆ. ಆ ಭಾವದಲ್ಲಿ, "ಒಳ ತಿಳಿವು" ಆಂತರಿಕ ಮತ್ತು ನಿಜವಾದ ಜ್ಞಾನವಾದರೆ "ಡುಕೃಂಕರಣೆ"ಯನ್ನು "ಹೊರ ತಿಳಿವು" ಎಂದು ಅನುವಾದಿಸಿದ್ದೇನೆ. ಈ ಕೆಲವು ಕೊಂಡಿಗಳು ತಿಳಿದುಕೊಳ್ಳಲು ಸಹಕಾರಿಯಾಗಬಹುದು: https://nivedita2015.wordpress.com/2015/09/25/grammatical-aspects-in-bhaja-govindam-verse-1/https://www.reddit.com/r/sanskrit/comments/5z3e1m/translating_dukrjkarane_any_hints/ಮೂಢಮತೇ: ಇದಕ್ಕೆ ಕೆಲವರು "ಮಂದಮತಿ" ಅಥವ ಕೇವಲ "ಮನವೇ" ಎನ್ನಬಹುದಲ್ಲ ಎಂದಿದ್ದಾರೆ. ಮೊದಲನೆಯದಾಗಿ, ಇಲ್ಲಿ ಮೂಢ ಎನ್ನುವುದಕ್ಕೆ ಅಜ್ಞ/ತಿಳಿಗೇಡಿ ಎನ್ನುವ ಸಾಮಾನ್ಯ ಅರ್ಥ ಇದೆ. ಭ್ರಮೆಗೊಳಗಾದವ, ಮರುಳ, ಮಂಕು ಹಿಡಿದವ ಎನ್ನುವದು ಇಲ್ಲಿ ಔಚಿತ್ಯಪೂರ್ಣವಾಗಿದೆ. ಅಂದರೆ ಮಾಯೆಯ ಜಾಲದಲ್ಲಿ ಸಿಕ್ಕು, ತನ್ನ ನಿಜ ಸ್ವರೂಪವನ್ನು ಅರಿಯದೆ, ಬೇರೆಯದಕ್ಕೆ ತಾ ಎಂದು ಅಂಟಿಕೊಂಡಿರುವವ ಎನ್ನುವುದು ಶಂಕರರ ತಾತ್ವಿಕ ವಿಚಾರಕ್ಕೆ ಹೊಂದಿಕೆಯಾಗುತ್ತದೆ. "ಮತಿ" ಎಂದರೆ ವಿವೇಚನೆಯ ಶಕ್ತಿ ಉಳ್ಳದ್ದು; ಮನಸ್ಸು ಎನ್ನುವುದಕ್ಕಿಂತ ವಿಶಿಷ್ಟವಾದದ್ದು. ವಿವೇಕ ಚೂಡಾಮಣಿಯ ಕರ್ತೃ ಆದ ಶಂಕರರು ಇದನ್ನು ಉದ್ದೇಶಪೂರ್ವಕ ಉಪಯೋಗಿಸಿದ್ದಾರೆ. ಆದ್ದರಿಂದ ಇದನ್ನು "ಮನ" ಎಂದು ಬದಲಾಯಿಸುವುದು ತಕ್ಕುದಲ್ಲ ಎನಿಸುತ್ತದೆ. ಮೇಲಾಗಿ, ಮೂಲದಲ್ಲಿ ಇರುವ ಮೂಢ ಪದವನ್ನು ಬಿಟ್ಟುಬಿಡುವುದೂ ಸರಿ ಅಲ್ಲ; ಅನುವಾದ ಅಂದರೆ (ಪದಶಃ ಅಲ್ಲದಿದ್ದರೂ) ಮೂಲಕ್ಕೆ ಆದಷ್ಟು ಬದ್ಧವಾಗಿರಬೇಕು.ಎರಡನೆಯದಾಗಿ, ಮಂದ ಎನ್ನುವುದು ಮೂಢ ಪದಕ್ಕೆ ಅನ್ವರ್ಥ ಪದ ಆದರೂ ಬೇರೆ ಅರ್ಥವೂ (slow, dull, dim...) ಬರಬಹುದು, ಅಲ್ಲದೆ, ಒಂದು ಸಂಸ್ಕೃತ ಪದಕ್ಕೆ ಬದಲಾಗಿ (ಕಾರಣ ಇಲ್ಲದೆ) ಇನ್ನೊಂದು ಸಂಸ್ಕೃತ ಪದ ಹಾಕಿದರೆ ಅದಕ್ಕೆ ಕನ್ನಡ ಅನುವಾದ ಏಕೆ ಅನ್ನಬೇಕು? -- ದ್ವಾದಶ ಮಂಜರಿಕಾ 00:04 ೧ ಭಜ ಗೋವಿಂದಂ ಭಜ ಗೋವಿಂದಂ 00:53 ೨ ಮೂಢ ಜಹೀಹಿ ಧನಾಗಮತೃಷ್ಣಾಂ 01:45 ೩ ನಾರೀಸ್ತನಭರನಾಭೀದೇಶಂ 02:26 ೪ ನಲಿನೀದಲಗತಜಲಮತಿತರಲಂ 03:10 ೫ ಯಾವದ್ವಿತ್ತೋಪಾರ್ಜನಸಕ್ತಃ 03:55 ೬ ಯಾವತ್‌ ಪವನೋ ನಿವಸತಿ ದೇಹೇ 04:40 ೭ ಬಾಲಸ್ತಾವತ್‌ ಕ್ರೀಡಾಸಕ್ತಃ05:25 ೮ ಕಾ ತೇ ಕಾಂತಾ? ಕಸ್ತೇ ಪುತ್ರಃ? 06:10 ೯ ಸತ್ಸಂಗತ್ವೇ ನಿಸ್ಸಂಗತ್ವಂ 06:49 ೧೦ ವಯಸಿ ಗತೇ ಕಃ ಕಾಮವಿಕಾರಃ? 07:29 ೧೧ ಮಾ ಕುರು ಧನ ಜನ ಯೌವನ ಗರ್ವಂ 08:09 ೧೨ ದಿನಯಾಮಿನ್ಯೌ, ಸಾಯಂ ಪ್ರಾತಃ 08:54 ೧೩ ಕಾ ತೇ ಕಾಂತಾ ಧನಗತಚಿಂತಾ? 09:40 ಕೃತಜ್ಞತೆ, ಸಂಪರ್ಕ

    12 min
  4. 10/15/2024

    The Good & the Bad- ಒಳ್ಳಿದರು-ಕೆಟ್ಟವರು (subhashita)

    ಒಳ್ಳಿದರು-ಕೆಟ್ಟವರು 👍 Like it? ...... ⁠⁠⁠⁠⁠⁠⁠⁠Subscribe and Share! ⁠⁠⁠⁠⁠⁠⁠⁠ 👁️ ⁠⁠⁠⁠⁠⁠⁠⁠Watch it⁠⁠⁠⁠⁠⁠⁠⁠  🕮 ⁠⁠⁠⁠⁠⁠⁠⁠Read it ⁠⁠⁠⁠⁠⁠⁠⁠  👂 ⁠⁠⁠⁠⁠⁠⁠⁠Listen it⁠⁠⁠⁠⁠⁠⁠⁠ 📧 ⁠⁠⁠⁠⁠⁠⁠⁠Subscribe to our newsletter The good and the bad Noonam Dugdhabdhimanthoththa - Wimou Sujanadurjanou; Kintvindoh sodarah purvah Kalakutasya Chetarah! Subhashitaratnabhandagara It's a gem in the Subhashitaratnabhandagara. Where in the world did good and evil come from? How are the good and the bad born? There are good and bad siblings in the same family. Who has not heard the story of the Kaurava Pandavas. How did Prahlada, the son of the demon Hiranyakashyapu, and vibhishana, the brother of Ravana, become good? The Yadavas, the relatives of Lord Krishna, got destroyed by fighting among themselves! Genes are not the cause; They are the the same! It is not due to the environment; That too is the same. Culture and Rituals are all the same. So it is impossible to explain why. You all know the story of Samudramantha, Churning of the Ocean. Devas and Danavas -sons of two sisters, remember- gathered for amrita, tied Mandara Parvata using Vasuki as a rope, and churned the ocean of milk. Then came first Kalakuta, Halahala, terrible poison. Then came the moon. Chandra Shitanshu, the king of stars, patron of medicines, Radiant of Milky Light, best friend of lovers, chakkuli mama of children, and calendar keeper of our festivals! Born together, Halahala is wicked while Chandappa is needed by all. What does this have to do with the good and the bad in us? Behold, the poet imagines: The good and the bad Born in Hal Kadal Kadeye; Anna Chandappa for Saralari, Kudos to the villains! The poet says that we too were born in this sea. But, for the wicked, the wicked Kalakoota is their elder brother, and for the the good, Chandrama is their elder brother! That is how, some of us are good and some are bad! Be that as it may. Since everyone's birth culture is the same, the situation is not hopeless. That means change is possible. We have wisdom and discernment. So, whether we become good or bad is in our hands. The choice is ours and yours. The good and the bad both were Born when the Milky Ocean was churned; For the good, Chandappa is their elder brother, The wicked have Kalakootappa as their edler brother! Man, you choose! Yours Visvesvara Dikshita The Good and the Bad Kannada Kali Casting Vijayadashami, Oct 12, 2024 _____ ಚೆನ್ನುಡಿ ಒಳ್ಳಿದರು ಕೆಟ್ಟವರು ನೂನಂ ದುಗ್ಧಾಬ್ಧಿಮಂಥೋತ್ಥಾ - ವಿಮೌ ಸುಜನದುರ್ಜನೌ; ಕಿಂತ್ವಿಂದೋಃ ಸೋದರಃ ಪೂರ್ವಃ ಕಾಲಕೂಟಸ್ಯ ಚೇತರಃ ! ಸುಭಾಷಿತರತ್ನಭಾಂಡಾಗಾರ ಇದು ಸುಭಾಷಿತ ಭಾಂಡಾಗಾರದಲ್ಲಿನ ಒಂದು ಅಣಿಮುತ್ತು. ಜಗತ್ತಿನಲ್ಲಿ ಒಳ್ಳೆಯದು ಕೆಟ್ಟದ್ದು ಎಲ್ಲಿಂದ ಬಂದವು? ಒಳ್ಳೆಯವರು ಕೆಟ್ಟವರು ಹುಟ್ಟಿದ್ದಾದರೂ ಹೇಗೆ? ಒಂದೇ ಮನೆತನದಲ್ಲಿ ಅಣ್ಣತಮ್ಮಂದಿರಲ್ಲೆ ಒಳ್ಳೆಯವರೂ ಕೆಟ್ಟವರೂ ಇರುತ್ತಾರೆ. ಕೌರವ ಪಾಂಡವರ ಕತೆ ಯಾರು ಕೇಳಿಲ್ಲ. ರಾಕ್ಷಸ ಹಿರಣ್ಯಕಷ್ಯಪುವಿನ ಮಗ ಪ್ರಹ್ಲಾದ‌, ರಾವಣನ ತಮ್ಮ ವಿಭೀಷಣ ಹೇಗೆ ಒಳ್ಳೆಯವರಾದರು? ಶ್ರೀ ಕೃಷ್ಣನ ದಾಯಾದಿಗಳಾದ ಯಾದವರು ತಮ್ಮ ತಮ್ಮಲ್ಲೆ ಹೊಡೆದಾಡಿಕೊಂಡು ನಿರ್ನಾಮವಾದರಲ್ಲ! ವಂಶವಾಹಿನಿ Geneಗಳು ಕಾರಣ ಎನ್ನಲಾಗುವುದಿಲ್ಲ; ಎಲ್ಲ ಒಂದೇ! ಬೆಳೆದ ವಾತಾವರಣ ಕಾರಣ ಎನ್ನಲಾಗುವುದಿಲ್ಲ; ಅದೂ ಒಂದೇ. ಸಂಸ್ಕಾರ ಸಂಸ್ಕೃತಿ ಎಲ್ಲವೂ ಒಂದೇ.‌ ಆದ್ದರಿಂದ ಯಾಕೆ ಹೀಗೆ ಎಂದು ವಿವರಿಸುವುದು ಅಸಾಧ್ಯ. ಸಮುದ್ರಮಂಥನ ಕತೆ ನಿಮಗೆಲ್ಲ ಗೊತ್ತಿದೆ. ದೇವದಾನವರು, ಇವರೂ ಅಕ್ಕ ತಂಗಿಯರ ಮಕ್ಕಳೇ, ನೆನಪಿಸಿಕೊಳ್ಳಿ, ಅಮೃತಕ್ಕೋಸ್ಕರ ಕೂಡಿಕೊಂಡು ಮಂದರ ಪರ್ವತವನ್ನು ಕಡೆಗೋಲಾಗಿ ಮತ್ತು ವಾಸುಕಿಯನ್ನು ಹಗ್ಗವನ್ನಾಗಿ ಬಳಸಿಕೊಂಡು ಕ್ಷೀರ ಸುಮುದ್ರವನ್ನು ಕಡೆದರು. ಆಗ ಮೊದಲು ಬಂದದ್ದೇ ಕಾಲಕೂಟ, ಹಾಲಾಹಲ, ಕೆಟ್ಟ ವಿಷ. ನಂತರ ಚಂದ್ರ ಬಂದ. ಚಂದ್ರನೋ ಶೀತಾಂಶು, ತಾರೆಗಳ ರಾಜ, ಓಷಧಿಗಳ ಪೋಷಕ, ಹಾಲ್‌ಬೆಳಕಿನ ಹೊಳಪ, ‌ಪ್ರೇಮಿಗಳ ಆಪ್ತಮಿತ್ರ, ಮಕ್ಕಳಿಗೆ ಚಕ್ಕುಲಿ ಮಾಮ, ನಮ್ಮ ಹಬ್ಬಹುಣ್ಣಿಮೆಗಳ calendar keeper ಕೂಡ! ಒಂದೇ ಹುಟ್ಟು, ಕಾಲಕೂಟ ಕೆಟ್ಟದ್ದಾದರೆ, ಚಂದಪ್ಪ ಎಲ್ಲರಿಗೂ ಬೇಕಾದವನಾದ. ಇದಕ್ಕೂ ಮತ್ತೂ ನಮ್ಮಲ್ಲಿನ ಒಳ್ಳೆ-ಕೆಟ್ಟವರಿಗೂ ಏನು ಸಂಬಂಧ? ಇದೋ ನೋಡಿ, ಕವಿ ಕಲ್ಪನೆ: ಒಳ್ಳಿದರು ಕೆಟ್ಟವರು ಕೂಡೆ ಹುಟ್ಟಿದರು ಹಾಲ್‌ ಕಡಲ ಕಡೆಯೆ; ಸರಳರಿಗೆ ಅಣ್ಣ ಚಂದಪ್ಪ, ದುರುಳರಿಗೆ ಹಾಲಾಹಲಪ್ಪ! ನಾವು ಕೂಡ ಹುಟ್ಟಿದ್ದು ಈ ಸಮುದ್ರದಲ್ಲೆ ಎನ್ನುತ್ತಾನೆ ಕವಿ. ಆದರೆ, ದುರುಳರಿಗೆ ದುಷ್ಟರಿಗೆ ಹಾಲಹಲವೆ ಸೋದರ , ಸರಳರಿಗೆ ಶಿಷ್ಟರಿಗೆ ಚಂದ್ರಮನೆ ಅಣ್ಣ ಅಂತೆ! ಅದಕ್ಕೆ .... Read More ಒಳ್ಳಿದರು-ಕೆಟ್ಟವರು ಕನ್ನಡ ಕಲಿ ಬಿತ್ತರಿಕೆ ವಿಜಯದಶಮಿ, ಅಕ್ಟೋಬರ ೧೨, ೨೦೨೪

    5 min
  5. 09/27/2024

    ಕಂತು ೨: ಟಕಟಕ ಜೋಕು, ಇನ್ನೂ ಬೇಕು ! Knock-Knock Jokes! -ನಾಕು ಜೋಕು, ಬೇಕೇ ಬೇಕು !

    👍 Like it? ...... ⁠⁠⁠⁠⁠⁠⁠⁠⁠⁠⁠⁠⁠⁠⁠Subscribe and Share! ⁠⁠⁠⁠⁠⁠⁠⁠⁠⁠⁠⁠⁠⁠⁠ 👁️ ⁠⁠⁠⁠⁠⁠⁠⁠⁠⁠⁠⁠⁠⁠⁠Watch it⁠⁠⁠⁠⁠⁠⁠⁠⁠⁠⁠⁠⁠⁠⁠  🕮 ⁠⁠⁠⁠⁠⁠⁠⁠⁠⁠⁠⁠⁠⁠⁠Read it ⁠⁠⁠⁠⁠⁠⁠⁠⁠⁠⁠⁠⁠⁠⁠  👂 ⁠⁠⁠⁠⁠⁠⁠⁠⁠⁠⁠⁠⁠⁠⁠Listen it⁠⁠⁠⁠⁠⁠⁠⁠⁠⁠⁠⁠⁠⁠⁠  📧 ⁠⁠⁠⁠⁠⁠⁠⁠⁠⁠⁠⁠⁠⁠⁠Subscribe to our newsletter⁠⁠⁠ 📞 ⁠⁠⁠Subscribe to WhatsApp ಕನ್ನಡ ಕಂಪು⁠ ಇಗೋ! ಮೊತ್ತ ಮೊದಲ ಬಾರಿಗೆ ಕನ್ನಡದಲ್ಲಿ ನಾಕ್-ನಾಕು ಜೋಕುಗಳು! ಮಕ್ಕಳಿಗೆ ಮುದ ನೀಡುವ knock-knock ಜೋಕುಗಳು ಇಂಗ್ಲಿಷಲ್ಲಿ ಸರ್ವೇ ಸಾಮಾನ್ಯ. ೨೦ನೆ ಶತಮಾನದ ಆರಂಭದಿಂದಲೆ ಅಮೆರಿಕದ ಇತಿಹಾಸದಲ್ಲಿ ಚಿಗುರೊಡೆದ ನಾಕ್-ನಾಕು ಜೋಕುಗಳು ಇಂದೂ ಜನಪ್ರಿಯವಾಗಿವೆ. ವಿಶೇಷವಾಗಿ ಮಕ್ಕಳಿಗೆ ಪ್ರಿಯವಾದರೂ, ದೊಡ್ಡವರನ್ನೂ ನಗಿಸಬಹುದು. ಇವು ಹಾಸ್ಯ ಚಟಾಕಿಗಳೋ, ಮಕ್ಕಳ ಮುದ್ದು ಮಾತುಗಳೋ ಅಥವ ಪೆದ್ದು ಗೊಜಗುಟ್ಟುವಿಕೆಗಳೋ ಇನ್ನೂ ಇತ್ಯರ್ಥವಾಗಿಲ್ಲ! [ಹೆಚ್ಚಿನ ಮಾಹಿತಿಗೆ: ಕೆಳಗೆ ನಮೂದಿಸಿರುವ ⁠ನ್ಯಾಶನಲ್‌ ಪಬ್ಲಿಕ್‌ ರೇಡಿಯೋದ ಲೇಖನ⁠ವನ್ನು ಓದಿ. [https://www.npr.org/sections/npr-history-dept/2015/03/03/389865887/the-secret-history-of-knock-knock-jokes] ಕನ್ನಡದಲ್ಲಿ ಇವು ಮೊದಲ ನಾಕ್-ನಾಕು ಜೋಕುಗಳು ಎನ್ನಬಹುದು. ಓದಿ ನಲಿಯಿರಿ. ಇಂಥ ಅಥವ ಬೇರೆ ತರಹದ ನಾಕು ನಾಕ್-ನಾಕು ಜೋಕುಗಳನ್ನು ನೀವೂ ರಚಿಸಿ, ಕಾಮೆಂಟು ಹಾಕಿರಿ. ಮಾದರಿ ಜೋಕುಗಳು ಬೇಕಾಗಿದ್ದರೆ, "⁠knock-knock Jokes" ಅಂತ ಗೂಗಲಿಸದರೆ ⁠ಸಾವಿರಾರು ಜೋಕುಗಳು ಸಿಗುತ್ತವೆ [https://www.google.com/search?q=knock+knock+jokes] ಎಚ್ಚರಿಕೆ! ನಾಕು-ನಾಕು ಜೋಕುಗಳನ್ನು ಬೇರೆ ಭಾಷೆಯಿಂದ ಕಾಪಿ ಹೊಡೆಯಲು ಸಾಧ್ಯವಿಲ್ಲ! ಕೆಳಗಿನವುಗಳನ್ನು ಮಾದರಿಯಾಗಿ ಇಟ್ಟುಕೊಂಡು ಸ್ವಂತ ಟಕ-ಟಕ ಯಾ ಕಟ-ಕಟ ಜೋಕುಗಳನ್ನು ಕಟ್ಟಿರಿ ಯಾ ಕುಟ್ಟಿರಿ. ಇಲ್ಲಿನ ಕೆಲವು ಜೋಕುಗಳು, ⁠ಕನ್ನಡ ಕಲಿ ಮ್ಯಗ್‌ಝೀನ್‌ ಸಂಪುಟ ೧, ಸಂಚಿಕೆ ೨, ಜೂನ್ ೨೦೦೬,⁠ ರಲ್ಲಿ ಪ್ರಕಟವಾಗಿದ್ದವು. [https://www.scribd.com/doc/36032085/V01I02-Kannada-Kali-ಕನ-ನಡ-ಕಲಿ-June-2006] ಪುಟ ೫ರಲ್ಲಿ ಪ್ರಕಟವಾಗಿದ್ದವು -------- ಕಂತು ೨ -------- ಟಕ-ಟಕ, ಟಕ್ ಯಾರು ಅಲ್ಲಿ? ದ್ರಾಕ್ಷಿ. ಯಾರು ದ್ರಾಕ್ಷಿ? ಕೊಳ್ಳಾಗಿನ ರುದ್ರಾಕ್ಷಿ ಸರ!‌ ಟಕ-ಟಕ, ಟಕ್ ಯಾರು ಅದು? ಮಾರಿ. ಯಾ ಮಾರಿ? ಸೈಬರ್‌ ಕಳ್ಳಿ! ಟಕ-ಟಕ, ಟಕ್ ಯಾರು ಅಲ್ಲಿ? ಒತ್ತು. ಯಾ ಒತ್ತು? ಯಾವತ್ತು ಆದರೆ ಏನು? ಇವತ್ತೇ! ಟಕ-ಟಕ, ಟಕ್ ಯಾರು ಅದು? ದನ. ಯಾರೋ ದನ? ಅಳುತ್ತ ಕೂತಿರೋ ರೋದನ! ಟಕ-ಟಕ, ಟಕ್ ಯಾರು ಅದು? ಮಿನಿ. ಯಾ ಮಿನಿ? ರಾತ್ರಿ ಬರುವವಳು! ಟಕ-ಟಕ, ಟಕ್ ಯಾರು ಅಲ್ಲಿ? ಮತ್ತ. ಮತ್ ಯಾರು? ಮತ್ಯಾರು? ನಾನೇ!! ಟಕ-ಟಕ, ಟಕ್ ಯಾರು ಅದು? ಹತ್ತ. ಹತ್ ಯಾರು? ಹೌದು, ಹತ್ಯಾರು, ಇರೀತೀನಿ ಹುಷಾರು!! ಟಕ-ಟಕ, ಟಕ್ ಯಾರು ಅದು? ನಾ. ನಾ ಯಾರು? ನಾಯರು, ನಾ ಗೋವಿಂದ ನಾಯರು, ನೀ ಯಾರು? --- ಕನ್ನಡ ಕಲಿ ಬಿತ್ತರಿಕೆ ಸಪ್ಟಂಬರ ೨೭, ೨೦೨೪ Kannada Kali Bittarike September 27, 2024 ಟಕಟಕ ಜೋಕು : ಇನ್ನೂ ಬೇಕು ನಾಕ್-ನಾಕು ಜೋಕು : ಬೇಕೇ ಬೇಕು ಕಂತು ೧ ಜೋಕು ನಿರೂಪಕರು: ಗಗನ ಗೂಗ್ಲೆ ಮತ್ತು ಸಪ್ನಾ ಗೂಗ್ಲೆ

    3 min
  6. 09/27/2024

    ಕಂತು ೧: ಟಕಟಕ ಜೋಕು, ಇನ್ನೂ ಬೇಕು ! Knock-Knock Jokes! -ನಾಕು ಜೋಕು, ಬೇಕೇ ಬೇಕು !

    👍 Like it? ...... ⁠⁠⁠⁠⁠⁠⁠⁠⁠⁠⁠⁠⁠⁠Subscribe and Share! ⁠⁠⁠⁠⁠⁠⁠⁠⁠⁠⁠⁠⁠⁠ 👁️ ⁠⁠⁠⁠⁠⁠⁠⁠⁠⁠⁠⁠⁠⁠Watch it⁠⁠⁠⁠⁠⁠⁠⁠⁠⁠⁠⁠⁠⁠  🕮 ⁠⁠⁠⁠⁠⁠⁠⁠⁠⁠⁠⁠⁠⁠Read it ⁠⁠⁠⁠⁠⁠⁠⁠⁠⁠⁠⁠⁠⁠  👂 ⁠⁠⁠⁠⁠⁠⁠⁠⁠⁠⁠⁠⁠⁠Listen it⁠⁠⁠⁠⁠⁠⁠⁠⁠⁠⁠⁠⁠⁠  📧 ⁠⁠⁠⁠⁠⁠⁠⁠⁠⁠⁠⁠⁠⁠Subscribe to our newsletter⁠⁠ 📞 ⁠⁠Subscribe to WhatsApp ಕನ್ನಡ ಕಂಪು ಇಗೋ! ಮೊತ್ತ ಮೊದಲ ಬಾರಿಗೆ ಕನ್ನಡದಲ್ಲಿ ನಾಕ್-ನಾಕು ಜೋಕುಗಳು! ಮಕ್ಕಳಿಗೆ ಮುದ ನೀಡುವ knock-knock ಜೋಕುಗಳು ಇಂಗ್ಲಿಷಲ್ಲಿ ಸರ್ವೇ ಸಾಮಾನ್ಯ. ೨೦ನೆ ಶತಮಾನದ ಆರಂಭದಿಂದಲೆ ಅಮೆರಿಕದ ಇತಿಹಾಸದಲ್ಲಿ ಚಿಗುರೊಡೆದ ನಾಕ್-ನಾಕು ಜೋಕುಗಳು ಇಂದೂ ಜನಪ್ರಿಯವಾಗಿವೆ. ವಿಶೇಷವಾಗಿ ಮಕ್ಕಳಿಗೆ ಪ್ರಿಯವಾದರೂ, ದೊಡ್ಡವರನ್ನೂ ನಗಿಸಬಹುದು. ಇವು ಹಾಸ್ಯ ಚಟಾಕಿಗಳೋ, ಮಕ್ಕಳ ಮುದ್ದು ಮಾತುಗಳೋ ಅಥವ ಪೆದ್ದು ಗೊಜಗುಟ್ಟುವಿಕೆಗಳೋ ಇನ್ನೂ ಇತ್ಯರ್ಥವಾಗಿಲ್ಲ! [ಹೆಚ್ಚಿನ ಮಾಹಿತಿಗೆ: ಕೆಳಗೆ ನಮೂದಿಸಿರುವ ನ್ಯಾಶನಲ್‌ ಪಬ್ಲಿಕ್‌ ರೇಡಿಯೋದ ಲೇಖನವನ್ನು ಓದಿ. [https://www.npr.org/sections/npr-history-dept/2015/03/03/389865887/the-secret-history-of-knock-knock-jokes] ಕನ್ನಡದಲ್ಲಿ ಇವು ಮೊದಲ ನಾಕ್-ನಾಕು ಜೋಕುಗಳು ಎನ್ನಬಹುದು. ಓದಿ ನಲಿಯಿರಿ. ಇಂಥ ಅಥವ ಬೇರೆ ತರಹದ ನಾಕು ನಾಕ್-ನಾಕು ಜೋಕುಗಳನ್ನು ನೀವೂ ರಚಿಸಿ, ಕಾಮೆಂಟು ಹಾಕಿರಿ. ಮಾದರಿ ಜೋಕುಗಳು ಬೇಕಾಗಿದ್ದರೆ, "knock-knock Jokes" ಅಂತ ಗೂಗಲಿಸದರೆ ಸಾವಿರಾರು ಜೋಕುಗಳು ಸಿಗುತ್ತವೆ [https://www.google.com/search?q=knock+knock+jokes] ಎಚ್ಚರಿಕೆ! ನಾಕು-ನಾಕು ಜೋಕುಗಳನ್ನು ಬೇರೆ ಭಾಷೆಯಿಂದ ಕಾಪಿ ಹೊಡೆಯಲು ಸಾಧ್ಯವಿಲ್ಲ! ಕೆಳಗಿನವುಗಳನ್ನು ಮಾದರಿಯಾಗಿ ಇಟ್ಟುಕೊಂಡು ಸ್ವಂತ ಟಕ-ಟಕ ಯಾ ಕಟ-ಕಟ ಜೋಕುಗಳನ್ನು ಕಟ್ಟಿರಿ ಯಾ ಕುಟ್ಟಿರಿ. ಇಲ್ಲಿನ ಕೆಲವು ಜೋಕುಗಳು, ಕನ್ನಡ ಕಲಿ ಮ್ಯಗ್‌ಝೀನ್‌ ಸಂಪುಟ ೧, ಸಂಚಿಕೆ ೨, ಜೂನ್ ೨೦೦೬, ರಲ್ಲಿ ಪ್ರಕಟವಾಗಿದ್ದವು. [https://www.scribd.com/doc/36032085/V01I02-Kannada-Kali-ಕನ-ನಡ-ಕಲಿ-June-2006] ಪುಟ ೫ರಲ್ಲಿ ಪ್ರಕಟವಾಗಿದ್ದವು ------- ಕಂತು ೧ ------- ಟಕ-ಟಕ, ಟಕ್ ಯಾರು ಅಲ್ಲಿ? ಮಂಗಲಾ. ಮಂಗಲಾ ಯಾರು? ಲಾಯರು ನಾನು, ಮಂಗ ನೀನು. ಲಗೂನ ತಗೀ ಬಾಗಿಲ! ಟಕ-ಟಕ, ಟಕ್ ಯಾರು ಅದು? ಸುಮ ನಾ ಸುಮನಾ ಯಾರು? ಸುಮ ನಾ; ನೀ ಯಾರು ನನಗೇನು ಗೊತ್ತು?ಟಕ-ಟಕ, ಟಕ್ ಯಾರು ಅಲ್ಲಿ? ನಾಥ. ನಾತ ಯಾರು? ತಯಾರು ಇದ್ರೆ ಬಾಗಿಲ ತೆಗೆದು ಮೂಸು.ಟಕ-ಟಕ, ಟಕ್ ಯಾರು ಅದು? ಉಪ್ಪು ಕಾರ. ಉಪ್ಪು ಕಾರ ಯಾರು? ಉಪಕಾರ ಮಾಡಿ ಬಾಗಿಲ ತೆಗೀಯೆ ಮಾರಾಯತಿ! ಟಕ-ಟಕ, ಟಕ್ ಯಾರು ಅದು? ಮಾಲು. ಯಾರು ಮಾಲು? ತಲೆಗೆ ಸುತ್ತಿಕೊಳ್ಳುವುದು. ಟಕ-ಟಕ, ಟಕ್ ಯಾರು ಅಲ್ಲಿ? ಕುಮಾಯಿ. ಯಾರು ಕುಮಾಯಿ? ಪಂಢರಪುರದ ವಿಠ್ಠಲ ರುಕುಮಾಯಿ! ಟಕ-ಟಕ, ಟಕ್ ಯಾರು ಅಲ್ಲಿ? ಪೈ. ಯಾರು ಪೈ? ಲಕ ಲಕ ಹೊಳೀತಿರೋ ಬೆಳ್ಳೀ ಪೈ. ಟಕ-ಟಕ, ಟಕ್ ಯಾರು ಅದು? ಜಿನ. ಯಾರು ಜಿನ? ಬರಬಾರದ ರೋಗ ರುಜಿನ. -------- ಕಂತು ೨ -------- ಟಕ-ಟಕ, ಟಕ್ ಯಾರು ಅಲ್ಲಿ? ದ್ರಾಕ್ಷಿ. ಯಾರು ದ್ರಾಕ್ಷಿ? ಕೊಳ್ಳಾಗಿನ ರುದ್ರಾಕ್ಷಿ ಸರ!‌ ಟಕ-ಟಕ, ಟಕ್ ಯಾರು ಅದು? ಮಾರಿ. ಯಾ ಮಾರಿ? ಸೈಬರ್‌ ಕಳ್ಳಿ! ಟಕ-ಟಕ, ಟಕ್ ಯಾರು ಅಲ್ಲಿ? ಒತ್ತು. ಯಾ ಒತ್ತು? ಯಾವತ್ತು ಆದರೆ ಏನು? ಇವತ್ತೇ! ಟಕ-ಟಕ, ಟಕ್ ಯಾರು ಅದು? ದನ. ಯಾರೋ ದನ? ಅಳುತ್ತ ಕೂತಿರೋ ರೋದನ! ಟಕ-ಟಕ, ಟಕ್ ಯಾರು ಅದು? ಮಿನಿ. ಯಾ ಮಿನಿ? ರಾತ್ರಿ ಬರುವವಳು! ಟಕ-ಟಕ, ಟಕ್ ಯಾರು ಅಲ್ಲಿ? ಮತ್ತ. ಮತ್ ಯಾರು? ಮತ್ಯಾರು? ನಾನೇ!! ಟಕ-ಟಕ, ಟಕ್ ಯಾರು ಅದು? ಹತ್ತ. ಹತ್ ಯಾರು? ಹೌದು, ಹತ್ಯಾರು, ಇರೀತೀನಿ ಹುಷಾರು!! ಟಕ-ಟಕ, ಟಕ್ ಯಾರು ಅದು? ನಾ. ನಾ ಯಾರು? ನಾಯರು, ನಾ ಗೋವಿಂದ ನಾಯರು, ನೀ ಯಾರು? --- ಕನ್ನಡ ಕಲಿ ಬಿತ್ತರಿಕೆ ಸಪ್ಟಂಬರ ೨೭, ೨೦೨೪ Kannada Kali Bittarike September 27, 2024 ಟಕಟಕ ಜೋಕು : ಇನ್ನೂ ಬೇಕು ನಾಕ್-ನಾಕು ಜೋಕು : ಬೇಕೇ ಬೇಕು ಕಂತು ೧ ಜೋಕು ನಿರೂಪಕರು: ಗಗನ ಗೂಗ್ಲೆ ಮತ್ತು ಸಪ್ನಾ ಗೂಗ್ಲೆ

    3 min
  7. 08/24/2024

    ಭಾಷೆ ಕಲಿಸಬೇಕಾದ್ದು ಹೇಗೆ How a Language Ought to be Taught

    👍 Like it? ...... ⁠⁠⁠⁠⁠⁠⁠⁠⁠⁠⁠⁠⁠Subscribe and Share! ⁠⁠⁠⁠⁠⁠⁠⁠⁠⁠⁠⁠⁠ 👁️ ⁠⁠⁠⁠⁠⁠⁠⁠⁠⁠⁠⁠⁠Watch it⁠⁠⁠⁠⁠⁠⁠⁠⁠⁠⁠⁠⁠  🕮 ⁠⁠⁠⁠⁠⁠⁠⁠⁠⁠⁠⁠⁠Read it ⁠⁠⁠⁠⁠⁠⁠⁠⁠⁠⁠⁠⁠  👂 ⁠⁠⁠⁠⁠⁠⁠⁠⁠⁠⁠⁠⁠Listen it⁠⁠⁠⁠⁠⁠⁠⁠⁠⁠⁠⁠⁠  📧 ⁠⁠⁠⁠⁠⁠⁠⁠⁠⁠⁠⁠⁠Subscribe to our newsletter⁠ 📞 ⁠Subscribe to WhatsApp ಕನ್ನಡ ಕಂಪು [ ಜುಲೈ ೨೨, ೧೯೩೮ರಂದು ಜನಿಸಿ, ಅದ್ವಿತೀಯ ಕಾದಂಬರಿಕಾರ, ನಾಟಕಕಾರ, ಕವಿ, ಭಾಷಾತಜ್ಞ, ಶಿಕ್ಷಕ ಮತ್ತು ಕೃಷಿಕ ಆಗಿದ್ದ , ಕಾಸರಗೋಡಿನ ಕನ್ನಡಿಗ ಕೆ.ಟಿ.ಗಟ್ಟಿ ಅವರು ಫೆಬ್ರುವರಿ ೧೯, ೨೦೨೪ರಂದು ತಮ್ಮ ೮೫ನೆ ವಯಸ್ಸಿನಲ್ಲಿ ಮಂಗಳೂರಿನಲ್ಲಿ ನಿಧನರಾದರು. ಈ ಲೇಖನ ಜೂನ್ ೨೦೦೮ರ‌ ಕನ್ನಡ ಕಲಿ ಮ್ಯಗ್‌ಝೀನ್‌ನಲ್ಲಿ ಪ್ರಕಟವಾಗಿತ್ತು. ಕನ್ನಡ ಕಲಿಗಳಿಗೆ ಇದು ಇಂದೂ ಮಾರ್ಗದರ್ಶಿಯಾಗಿದೆ. -ಸಂ] ಭಾಷೆ ಕಲಿಸಬೇಕಾದ್ದು ಹೇಗೆ How a Language Ought to be Taught ಬರೆಹ: ಕೆ. ಟಿ. ಗಟ್ಟಿ ಓದು: ವಿಶ್ವೇಶ್ವರ ದೀಕ್ಷಿತ ಸಂಗೀತ: ಆಕಾಶ ದೀಕ್ಷಿತ [ಕೆ.ಟಿ. ಗಟ್ಟಿ ಅವರು ಈ ಲೇಖನದಲ್ಲಿ ಹೇಳುವ ಮಾತುಗಳು, ಕರ್ನಾಟಕದಲ್ಲಿ ಕನ್ನಡ ಮಕ್ಕಳಿಗೆ ಇಂಗ್ಲೀಷ್‌ ಕಲಿಸುವ ಕುರಿತು ಹೇಳಿದಂತೆ ಅನಿಸಬಹುದು. ಆದರೆ ಅವೆಲ್ಲ ವಿದೇಶದಲ್ಲಿ ಹುಟ್ಟಿ ಬೆಳೆಯುತ್ತಿರುವ ಕನ್ನಡ ಮಕ್ಕಳಿಗೆ ಕನ್ನಡ ಕಲಿಸುದಕ್ಕೂ ಸಂಪೂರ್ಣವಾಗಿ ಅನ್ವಯಿಸುತ್ತವೆ ಎನ್ನುವುದನ್ನು ನಾವು ವಿಶೇಷವಾಗಿ ಗಮನದಲ್ಲಿ ಇಡಬೇಕು - ಸಂ] ಭಾಷೆಯ ಆರಂಭ : ಮಾತು ಕನ್ನಡದ ತಾಯಿ ತೊಟ್ಟಿಲ ಮಗುವಿಗೆ ಅಆಇಈ ಎಂದು ಜೋಗುಳ ಹಾಡುವುದಿಲ್ಲ. ಬ್ರಿಟಿಷ್ ತಾಯಿ ಎಬಿಸಿಡಿ ಎಂದು ಜೋಗುಳ ಹಾಡುವುದಿಲ್ಲ. ಭಾಷೆ ಮಾತಿನಿಂದ ಆರಂಭವಾಗುತ್ತದೆ. ‘ಅಕ್ಷರ ಓದುವಿಕೆ ಮತ್ತು ಬರೆಯುವಿಕೆ’ಯಿಂದ ಅಲ್ಲ. ಶಾಲೆಯನ್ನು ಪ್ರವೇಶಿಸುವ ಮೊದಲೇ ಕನ್ನಡದ ಮಗು ಚೆನ್ನಾಗಿ ಕನ್ನಡವನ್ನು ಆಡಲು ಕಲಿತುಕೊಂಡಿರುತ್ತದೆ. ಅದಕ್ಕೆ ‘ಕಷ್ಟ ಶಬ್ದ’ ‘ಸುಲಭ ಶಬ್ದ’ ಎಂಬ ವ್ಯತ್ಯಾಸವೇನೂ ಕಾಣಿಸುವುದಿಲ್ಲ. ಅರ್ಥವಾಗುವ ಮತ್ತು ಉಚ್ಚರಿಸಲಾಗುವ ಎಲ್ಲಾ ಶಬ್ದಗಳೂ ಸುಲಭ ಶಬ್ದಗಳೇ. ಮನೆಯಲ್ಲಿ ಅಪ್ಪ ಅಮ್ಮ ಅಕ್ಕ ಅಣ್ಣ ಆಡಿದ ಮಾತುಗಳೆಲ್ಲವನ್ನೂ ಅದು ಆಡುತ್ತದೆ. ಅವೆಲ್ಲವೂ ಮಗುವಿಗೆ ಅರ್ಥವಾಗುವ ವಾಕ್ಯಗಳೇ. ಮೊದಲ ಪಠ್ಯಪುಸ್ತಕ ಹೇಗಿರಬೇಕು ಮಗುವಿನ ಮೊದಲನೆಯ ಪಠ್ಯಪುಸ್ತಕದ ಪಾಠಗಳಲ್ಲಿ ಆ ವಾಕ್ಯಗಳು ಮತ್ತು ಅಂಥ ವಾಕ್ಯಗಳೇ ಇರಬೇಕು. ‘ಅವನು ಬಸವ ಇವಳು ಕನಕ’ ಇತ್ಯಾದಿ ಅರ್ಥಹೀನ ವಾಕ್ಯಗಳು ಇರಬಾರದು. ಮನುಷ್ಯ (ಮಗು) ಭಾಷೆಯನ್ನು ಮಾತಾಡಲು ಆರಂಭಿಸುವುದು ಅಆಇಈ ಬರುವ ಶಬ್ದಗಳಿಂದಲ್ಲ. ತಾನು ಅನುಕರಣೆಯಿಂದ ಪಡೆದುಕೊಂಡ ತನಗೆ ಅರ್ಥವಾಗುವಂಥ ಮಾತುಗಳಿಂದ ಮಾತು ಆರಂಭವಾಗುತ್ತದೆ. ಇಂಗ್ಲೆಂಡಿನಲ್ಲಿ ಇಂಗ್ಲಿಷ್ ಮಗು ಭಾಷಾರ್ಜನೆ ಮಾಡುವುದು ಕೂಡ ಹೀಗೆಯೇ. ಅಕ್ಷರಾಭ್ಯಾಸವಿಲ್ಲದ ಜನರು ಕೂಡ ಚಲೋದಾಗಿ ಮಾತಾಡುವುದಿಲ್ಲವೆ? ಅವರು ಹೇಗೆ ಭಾಷೆಯನ್ನು ಕಲಿತುಕೊಳ್ಳುತ್ತಾರೆ? ಅದೇ ರೀತಿ ಮಗು ಕೂಡ ಐದನೇ ವರ್ಷ ಪ್ರಾಯಕ್ಕೆ ಬಂದಾಗ ಒಂದಷ್ಟು ಭಾಷೆಯನ್ನು ಪಡೆದುಕೊಂಡಿರುತ್ತದೆ. ಅಂಥ ಮಗುವಿಗೆ ಅರಸ, ಇಣಚಿ ಮುಂತಾದ ಶಬ್ದಗಳಿಂದ, ಕ್ರಿಯಾಪದವಿಲ್ಲದ ವಾಕ್ಯಗಳಿಂದ ಭಾಷಾಭ್ಯಾಸ ಆರಂಭಿಸಬೇಕಾದ ಅಗತ್ಯವೇನು? ಮಾತು-ಗರುತು-ಓದು-ಬರೆ ವಿಧಾನ ನಾವು ಇಂಗ್ಲಿಷ್ ಕಲಿಸುವಲ್ಲಿ ಕೂಡ ಈ ರೀತಿ ನೈಸರ್ಗಿಕವಾಗಿ ಮಗು ತನ್ನ ಮಾತೃಭಾಷೆಯನ್ನು ಹೇಗೆ ಪಡೆಯುತ್ತದೆಯೋ ಹಾಗೆ ಪಡೆಯುವ ವಿಧಾನದಲ್ಲಿಯೇ ಕಲಿಸಬೇಕು. ಕನ್ನಡ ಮಗುವಿನ ಮಾತೃಭಾಷೆಯಾದ್ದರಿಂದ, ಒಂದನೇ ತರಗತಿಯಲ್ಲೇ ಓದು ಮತ್ತು ಬರೆಯುವಿಕೆ ವಾಕ್ಯಗಳಿಂದಲೇ ಆರಂಭಿಸಬಹುದು. ಮಗು ಅಕ್ಷರಗಳನ್ನು ನೋಡಿ ಶಬ್ದಗಳನ್ನು ಗುರುತಿಸಿಕೊಂಡು ಚೆನ್ನಾಗಿ ಓದಲು ಕಲಿತುಕೊಂಡ ಬಳಿಕ, ಶಬ್ದಗಳನ್ನು ಬರೆದು ಓದಿ ತೋರಿಸಬೇಕು. ಈ ಓದಿನ ಮೂಲಕ ಮಗುವಿಗೆ ಎಲ್ಲಾ ಅಕ್ಷರ ಪರಿಚಯ, ಅವುಗಳು ಮಾತಿನಲ್ಲಿ ಹೇಗೆ ಬರುತ್ತವೆಯೋ ಹಾಗೆ ಪರಿಪೂರ್ಣವಾಗಿ ಆಗುತ್ತದೆ. ಅನಂತರ ಶಬ್ದಗಳನ್ನು ಓದುತ್ತಾ ಇಡೀ ವಾಕ್ಯವನ್ನು ಬರೆಯಲು ಕಲಿಸಬೇಕು. ಹೀಗೆ ಕಲಿಸಿದರೆ, ಪರಂಪರಾಗತ ಅಆಇಈ ಅಕ್ಷರಗಳ ಮೂಲಕ ಕಲಿಯುವುದಕ್ಕಿಂತ ಚಲೋದಾಗಿ, ಸ್ಪಷ್ಟವಾಗಿ, ಅರ್ಥಪೂರ್ಣವಾಗಿ ಮತ್ತು ಆಶ್ಚರ್ಯಕರವೆನಿಸುವಷ್ಟು ವೇಗವಾಗಿ ಮಗು ಓದಲು ಬರೆಯಲು ಕಲಿತುಬಿಡುತ್ತದೆ. ಒಂದನೆಯ ದರ್ಜೆಯ ಪುಸ್ತಕ ಮೂರು ತಿಂಗಳಲ್ಲಿ ಮುಗಿದು ಹೋಗುತ್ತದೆ. ಮಗುವಿಗೆ ಓದಲು ಅಧ್ಯಾಪಕ ಮತ್ತು ತಾಯಿತಂದೆ ಬೇರೆ ಪುಸ್ತಕ ಹುಡುಕಬೇಕಾಗುತ್ತದೆ! ‘ಅ’ದಿಂದ ‘ಹ’ದ ವರೆಗೆ ಹೇಳಿಸುವುದು, ಓದಿಸುವುದು, ಬರೆಸುವುದು ಮಗುವಿಗೆ ನರಕ; ಮಗುವಿನ ಅಮೂಲ್ಯವಾದ ಕಲಿಯುವ ಸಮಯ ಪೋಲು! ಇಂಗ್ಲಿಷ್ ನಮ್ಮ ಮಗುವಿನ ಮಾತೃಭಾಷೆಯಲ್ಲವಾದ್ದರಿಂದ ಅದಕ್ಕೆ ಮೊದಲು ಮಾತಿನ ಮೂಲಕ ಇಂಗ್ಲಿಷ್ ಭಾಷೆಯ ಪರಿಚಯ ಆಗಬೇಕು. ಅಂದರೆ ಇಂಗ್ಲಿಷ್ ಕೂಡ ತನ್ನ ಮಾತೃಭಾಷೆಯಂತೆಯೇ ಒಂದು ಭಾಷೆ ಎಂಬ ಭಾವನೆ ಮಗುವಿಗೆ ಆಗಬೇಕು. ಅದಕ್ಕಾಗಿ ಇಂಗ್ಲಿಷಿನಲ್ಲಿ ಒಂದು ಅಥವಾ ಎರಡು ವರ್ಷ ಸಂಭಾಷಣೆ ಮಾತ್ರ ನಡೆಯಬೇಕು. ಮಕ್ಕಳನ್ನು ತರಗತಿ ಕೋಣೆಯಿಂದ ಹೊರಗೆ ಕರೆದುಕೊಂಡು ಹೋಗಿ ನಿಸರ್ಗದಲ್ಲಿರುವ ನೂರಾರು ವಸ್ತುಗಳನ್ನು ತೋರಿಸಿ ಅವುಗಳನ್ನು ಹೆಸರಿಸಿ ಅವುಗಳ ಬಗ್ಗೆ ಮಾತಾಡಬೇಕು. ಕಲಿಯಲು ಪರಿಸರ ಬೇಕು ನಗರದ ಮುಕ್ಕಾಲು ಪಾಲು ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ‘ಆಂಗ್ಲ’ ಪರಿಸರವೂ ಇಲ್ಲ, ಭಾರತೀಯ ಪರಿಸರವೂ ಇಲ್ಲ. ಆಕಾಶ ಕೂಡ ಕಾಣಿಸದ ಕೋಣೆಯಲ್ಲಿ ... __________ ಪೂರ್ತಿ ಲೇಖನ ಇಲ್ಲಿದೆ: https://kannadakali.com/article/language/onteachinglanguage.html ---- ಕನ್ನಡ ಕಲಿ ಬಿತ್ತರಿಕೆ, ಕನ್ನಡದ ಗುಟ್ಟು, ಅಗಸ್ಟ್‌ ೨೩, ೨೦೨೪ How a Language Ought to be Taught, ಲೇಖನ: ಕೆಟಿ ಗಟ್ಟಿ:, ಓದು: ವಿಶ್ವೇಶ್ವರ ದೀಕ್ಷಿತ, ಸಂಗೀತ: ಆಕಾಶ ದೀಕ್ಷಿತ, ಪಠ್ಯದಿಂದ ಧ್ವನಿಗೆ, ನೀರಜಾ ಗೂಗ್ಲೇ ಮತ್ತು ನಾನು, ಸಪ್ನಾ ಗೂಗ್ಲೇ,. ಸಂಪರ್ಕ, ನಮೋವಿಶ್ ಯ್ಯಾಟ್ ಯಾಹೂ ಡಾಟ್ ಕಾಮ್,. ಬಿತ್ತರಿಕೆ 15, ಕಾಲ 2024, ಸಂಖ್ಯೆ

    13 min
  8. 06/01/2024

    Gandhi: Part 3 - What You Said ಗಾಂಧಿ - ಕಂತು ೩ : ನಿಮ್ಮ ಏನಂತಿಗಳು

    👍 Like it? ...... ⁠⁠⁠⁠⁠⁠⁠⁠⁠⁠⁠⁠Subscribe and Share! ⁠⁠⁠⁠⁠⁠⁠⁠⁠⁠⁠⁠ 👁️ ⁠⁠⁠⁠⁠⁠⁠⁠⁠⁠⁠⁠Watch it⁠⁠⁠⁠⁠⁠⁠⁠⁠⁠⁠⁠  🕮 ⁠⁠⁠⁠⁠⁠⁠⁠⁠⁠⁠⁠Read it ⁠⁠⁠⁠⁠⁠⁠⁠⁠⁠⁠⁠  👂 ⁠⁠⁠⁠⁠⁠⁠⁠⁠⁠⁠⁠Listen it⁠⁠⁠⁠⁠⁠⁠⁠⁠⁠⁠⁠  📧 ⁠⁠⁠⁠⁠⁠⁠⁠⁠⁠⁠⁠Subscribe to our newsletter 📞 Subscribe to WhatsApp ಕನ್ನಡ ಕಂಪು ಮಹಾತ್ಮ ಗಾಂಧಿ - ಕಂತು ೩ : ಒಪ್ಪು - ತಪ್ಪು : ನಿಮ್ಮ ಏನಂತಿಗಳು ಗಾಂಧಿ ಮಹಾತ್ಮನೆ? ಗಾಂಧಿ ಮಾಡಿದ್ದೆಲ್ಲ ಸರಿಯೆ? ನಾವು ಎಡವಿದೆವೆ? ಲಾಭ ಆದದ್ದು ಅಗುತ್ತಿರುವುದು ಯಾರಿಗೆ? ಗಾಂಧಿ ಲೇಖನಕ್ಕೆ ಮತ್ತು ಗಾಂಧಿಯ ಬಗ್ಗೆ ಸೈದ್ಧಾಂತಿಕ ಮತ್ತು ವ್ಯಾವಹಾರಿಕ ನೆಲೆಗಳಲ್ಲಿ ವಿಚಾರಪೂರ್ಣ ಏನಂತಿಗಳನ್ನು ನಿಖರ ನುಡಿಗಳಲ್ಲಿ ಹಂಚಿಕೊಂಡ ಕೆ.ಪಿ. ರವಿಕುಮಾರ್, ಹೊಳಲ್ಕೆರೆ ಆರ್.‌ ಲಕ್ಷ್ಮೀವೆಂಕಟೇಶ, ಶ್ರೀನಿವಾಸ ಭಟ್, ಶ್ರೀನಿವಾಸ ಹೆಬ್ಬಾಳ, ಕೆ.ಟಿ. ಶೆಟ್ಟಿ, ಸ್ಮಿತಾ, ಮತ್ತು ತಮ್ಮ ಇಷ್ಟಾನಿಷ್ಟಗಳನ್ನು ವ್ಯಕ್ತಪಡಿಸಿದ ಎಲ್ಲ ಕನ್ನಡ ಕಲಿ ಓದುಗರಿಗೆ ನಮನಗಳು. ೧. ಸತ್ಯಾಸತ್ಯತೆ ಗಾಂಧಿ ಲೇಖನಕ್ಕೆ ಪ್ರತಿಕ್ರಿಯೆಯಿಸುತ್ತ "ಮಾಹಿತಿ ಪೂರ್ಣ ಲೇಖನ, ಒಳ್ಳೆಯ ಲೇಖನ " ಎಂದು ಸ್ಮಿತಾ ಅವರಿಗೆ ಅನಿಸಿದರೆ, ಕೆ. ಟಿ. ಶೆಟ್ಟಿ ಹೇಳುತ್ತಾರೆ, "ಕೆಲವು ಸತ್ಯ, ಕೆಲವು ಅರ್ಧ ಸತ್ಯ, ಇನ್ನು ಕೆಲವು ಪ್ರಶ್ನಾರ್ಥಕ ಸತ್ಯ." ಆದರೂ, "ಒಟ್ಟಿನಲ್ಲಿ ಗಾಂಧಿ ಒಬ್ಬ ಮಹಾತ್ಮನಾದ ಮಾನವ, ಮನುಕುಲಕ್ಕೊಂದು ಆದರ್ಶ!" ಎಂದು ಒಪ್ಪಿಕೊಳ್ಳುತ್ತಾರೆ. ಶ್ರೀನಿವಾಸ ಭಟ್ಟರು ಗಾಂಧಿ‌ ಪ್ರಯೋಗಿಸಿದ ಮೂರು ಪರಮಾಸ್ತ್ರಗಳನ್ನು ಗುರುತಿಸಿದ್ದರೆ‌, ಅದರಿಂದ "ಗಾಂಧಿ ಮಹಾತ್ಮನಾಗಲು ಬಯಸಿರಲಿಲ್ಲ!" ಎಂದು ಹೊಳಲ್ಕೆರೆ ಆರ್.‌ ಲಕ್ಷ್ಮೀವೆಂಕಟೇಶ ಒತ್ತಿ ಹೇಳುತ್ತಾರೆ. "ತುಂಬ ಸುಂದರ ನಿರೂಪಣೆ ಮತ್ತು ವ್ಯಾಖ್ಯಾನ. ಗಾಂಧೀಜಿಯವರ ಬಗ್ಗೆ ದೈವಿಕ ಭಾವ ಅಲ್ಲಗಳೆದರೂ ಅಭಿಮಾನ ತುಂಬಿಕೊಂಡಿದೆ. ಇಲ್ಲ ಇಲ್ಲ ಎಂದುಕೊಂಡೂ ರೋಚಕತೆಯೇ ಹೆಚ್ಚು, ಮುಕ್ತ ಆಲೋಚನೆ ಕಡಿಮೆ" ಎನ್ನುವುದು ಶ್ರೀನಿವಾಸ ಹೆಬ್ಬಾಳರ ಅನಿಸಿಕೆ. "ಲೇಖನ ಗಾಂಧಿಯವರ ತಾತ್ವಿಕ ಸೋಲುಗಳನ್ನು ದಾಖಲಿಸುವುದರಲ್ಲಿ ವಿಫಲವಾಗಿದೆ" ಎಂದು ವಿವರಿಸುತ್ತಾರೆ ಕೆ.ಪಿ. ರವಿಕುಮಾರ್. ೨. ಗಾಂಧಿ ಮಹಾತ್ಮನಾಗಲು ಬಯಸಿರಲಿಲ್ಲ! ಹೊಳಲ್ಕೆರೆ ಆರ್.‌ ಲಕ್ಷ್ಮೀವೆಂಕಟೇಶ ಹೀಗೆ ಹೇಳುತ್ತಾರೆ "ಗಾಂಧಿ ಒಬ್ಬ ಮುಗ್ಧ, ಹೆಚ್ಚು ತಿಳಿಯದ, ಬಲಶಾಲಿಯಲ್ಲದ, ದುಷ್ಟ ಶಕ್ತಿಗಳಿಗೆ ಹೆದರುವ, ... ಹೀಗೆ, ಭಾರತದ ಇತರ ಎಲ್ಲ ಯುವಕರಂತೆಯೆ ಇದ್ದ. ನಮ್ಮ, ವೈಯಕ್ತಿಕ ಮತ್ತು ರಾಷ್ಟ್ರದ, ಹಿತಕ್ಕಾಗಿ ಗಾಂಧಿಯನ್ನು ಬಳಸಿಕೊಂಡೆವು (ಬಳಸಿಕೊಳ್ಳುತ್ತಿದ್ದೇವೆ.) "ಗಾಂಧಿಯಿಂದಲೆ ಭಾರತಕ್ಕೆ ಸ್ವಾತಂತ್ರ್ಯ ದೊರಕಿತು. ಇಲ್ಲದಿದ್ದರೆ ನಾವು ನಮ್ಮ (ವಸುಧೈವ ಕುಟುಂಬಕಂ, ಇತ್ಯಾದಿ) ಸ್ವಂತ ಬೋಧನೆಗಳನ್ನು ಅರ್ಥಮಾಡಿಕೊಳ್ಳದೆ ಗುಲಾಮರಾಗಿ ಬಳಲುತ್ತಿದ್ದೆವು. ನಮ್ಮೆಲ್ಲರಂತೆ, ಗಾಂಧಿಯೂ ವಿದೇಶಿ ಪದವಿಯನ್ನು (ಕಾನೂನಿನಲ್ಲಿ) ಗಳಿಸಲು ಸಲಹೆ ಪಡೆದರು. ತಮ್ಮ ಸುಮಾರು ೧೭ನೇ ಎಳೆ ವಯಸ್ಸಿನಲ್ಲಿ , ಅವರ ತಾಯಿ ದೈನಂದಿನ ಪೂಜೆ ಮಾಡುವಾಗ ಹಾಡುತ್ತಿದ್ದ ಕೀರ್ತನೆಗಳನ್ನು ಹೊರತುಪಡಿಸಿ, ಅವರಿಗೆ ಭಾರತದ ಬಗ್ಗೆ - ಭಗವದ್ಗೀತೆ ಅಥವಾ ಯಾವುದೇ ಮಹಾಕಾವ್ಯಗಳ ಬಗ್ಗೆ - ಏನೂ ತಿಳಿದಿರಲಿಲ್ಲ. ಎಲ್ಲರಂತೆ, ಮನೆಯಿಂದ ಹೊರಬಂದ ನಂತರ, ಜಗತ್ತನ್ನು ಎದುರಿಸಲು ಪ್ರಯತ್ನಿಸುತ್ತಿರುವಾಗ, ಇಂಗ್ಲೆಂಡ್‌ನಲ್ಲಿ ಕಂಡ ಕೆಲವು ಕ್ರಿಶ್ಚಿಯನ್ನರು, ಪಾದ್ರಿಗಳು ಹಿಂದೂ ಧರ್ಮಗ್ರಂಥಗಳಲ್ಲಿ ಏನು ಹೇಳಲಾಗಿದೆ ಎಂದು ತಿಳಿದುಕೊಳ್ಳಲು ಸಹಜವಾಗಿ ಪ್ರಶ್ನಿಸಿದರು. ಏನನ್ನೂ ಹೇಳಲು ಸಾಧ್ಯವಾಗದ ಗಾಂಧಿ ಆಘಾತಕ್ಕೊಳಗಾದರು. ಅದಕ್ಕೆ, ಅವರು ಇಂಗ್ಲೆಂಡ್‌ನ ಪ್ರಮುಖ ವಕೀಲರಾದ ಸರ್ ಫಿರೋಜ್ ಶಾ ಮೆಹ್ತಾ ಅವರಂತಹ ಕೆಲವು ಭಾರತೀಯ ಸ್ನೇಹಿತರನ್ನು ಸಂಪರ್ಕಿಸಿದರು ಮತ್ತು ಗ್ರಂಥಾಲಯಗಳಿಗೆ ಭೇಟಿ ನೀಡುವುದನ್ನು ಆರಂಭಿಸಿದರು. ಸುಮಾರು ಒಂದು ವಾರ ಅಧ್ಯಯನ ಮಾಡಿದ ನಂತರ ನಮ್ಮ ಮಹಾಕಾವ್ಯಗಳ ಬಗ್ಗೆ ಹೇಳುವ ಭಗವದ್ಗೀತೆ ಎನ್ನುವ ಒಂದು ಸಂಕ್ಷಿಪ್ತ ಪಠ್ಯ ಇದೆ ಎಂದು ತಿಳಿಯಿತು. ಅವನ್ನು ತನ್ನ ಕ್ರಿಶ್ಚಿಯನ್ ಸ್ನೇಹಿತರೊಂದಿಗೆ ಚರ್ಚಿಸತೊಡಗಿದಾಗ ತನಗೆ ಎಷ್ಟು ತಿಳಿದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಯಿತು. ಗಾಂಧಿಯ ಕಾನೂನು ಮತ್ತಿತರ ಮಾನವೀಯ ಪಠ್ಯ ಪುಸ್ತಕಗಳ ಹೊರತಾದ ಕಲಿಕೆ ಪ್ರಾರಂಭವಾದ್ದು ಹೀಗೆ. "ದಕ್ಷಿಣ ಆಫ್ರಿಕಾದ ರೈಲಿನಲ್ಲಿ ಪ್ರಯಾಣಿಸುವಾಗ, ತನ್ನ ಕಂಪಾರ್ಟ್‌ಮೆಂಟ್‌ನಿಂದ ಹೊರಹಾಕಲ್ಪಟ್ಟಾಗ ಅನುಭವಿಸಿದ ನಿಜ ನೋವು ಗಾಂಧಿಯ ಪ್ರಪಂಚದ ದೃಷ್ಟಿಕೋನದ ಬದಲಾವಣೆಗೆ ಕ್ರಮೇಣ ಕಾರಣವಾಯ್ತ; ಅದೇ, ಅಂತಿಮವಾಗಿ, ತಾಯಿ ಭಾರತಿಯ ಭವಿಷ್ಯವನ್ನು ಬದಲಾಯಿಸಿತು. "ಭಾರತವು ೧೮೫೭ ರಿಂದ ಬ್ರಿಟಿಷ್ ಆಳ್ವಿಕೆಯ ವಿರುದ್ಧ ಹೋರಾಡುತ್ತಿದ್ದರೂ, ಯಾವುದೇ ಸಂಘಟಿತ ಹೋರಾಟ ಇರಲಿಲ್ಲ. ತಿಲಕ್, ಗೋಖಲೆ, ಸಾವರ್ಕರ್ ಅಥವಾ ಬೋಸ್ ಮತ್ತಿತರರ ಎಲ್ಲ ಹೋರಾಟಗಳು ಅಲ್ಪಕಾಲಿಕವಾಗಿದ್ದವು. ನಿಜವಾದ ಬಲಿಷ್ಠ ಮತ್ತು ಸಮರ್ಥ ನಾಯಕತ್ವ ಗಾಂಧಿಯವರಿಂದಲೇ ಲಭ್ಯವಾಯಿತು. ಬ್ರಿಟಿಷರನ್ನು ಅರಿತು ಮತ್ತು ಬ್ರಿಟಿಷರ ನೀತಿಗಳನ್ನು ಅರ್ಥಮಾಡಿಕೊಂಡಿದ್ದರಿಂದ ಪ್ರತಿ-ಹೋರಾಟವನ್ನು ನಡೆಸಲು ಗಾಂಧಿ ಶಕ್ತರಾಗಿದ್ದರು. ಅದಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದರು. ಅವರ ಕೌಟುಂಬಿಕ ಜೀವನ ನಾಶವಾಯಿತು. ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಲಿಲ್ಲ. ಸ್ವತಃ ಕಬ್ಬಿಣದ ಕಂಬಿಗಳ ಹಿಂದೆ ಅನೇಕ ಬಾರಿ ದಿನಗಳೆದರು. "ಗಾಂಧಿಯ ಆದರ್ಶ ತತ್ವಗಳು, ಸ್ವ- ನಂಬಿಕೆ, ಮತ್ತು ಎಲ್ಲಕ್ಕಿಂತ ಹೆಚ್ಚಾಗಿ, ಸತ್ಯ ಮತ್ತು ಸತ್ಯ ಮಾತ್ರ ಗಾಂಧಿ ನಾಯಕತ್ವದ ದೊಡ್ಡ ಶಕ್ತಿಯಾಗಿದ್ದವು. ಬ್ರಿಟಿಷ ಸರ್ಕಾರ ಲೇಬರ್ ಪಕ್ಷಕ್ಕೆ ಸೇರಿದ್ದು, ವಿಶ್ವಯುದ್ಧದ ದುಷ್ಪರಿಣಾಮ, ಮತ್ತು ಬ್ರಿಟನ್‌ನ ಮೇಲೆ ಅದರ ಪ್ರಭಾವ ಇತ

    14 min

    About

    Explore varied topics to unlock the secrets of Kannada Language ಕನ್ನಡದ ಗುಟ್ಟನ್ನು ರಟ್ಟು ಮಾಡುವ ವಿವಿಧ ವಿಷಯಗಳ ವಿಚಾರ Read at http://kannadakali.com Watch at http://youtube.com/channel/UCCON6n4lEgj6NsPqCLZdDSw Kannada Kali : Kannadada Guttu

    Content Restricted

    This episode can’t be played on the web in your country or region.

    To listen to explicit episodes, sign in.

    Stay up to date with this show

    Sign in or sign up to follow shows, save episodes, and get the latest updates.

    Select a country or region

    Africa, Middle East, and India

    Asia Pacific

    Europe

    Latin America and the Caribbean

    The United States and Canada